ದಿಢೀರ್ ಮೈಸೂರಿಗೆ ಬಂದು ಚಿಕಿತ್ಸೆ ಪಡೆದ ಬಿಹಾರ ಸಿಎಂ ನಿತೀಶ್ ಕುಮಾರ್

ಮೈಸೂರು: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬುಧವಾರ ದಿಢೀರ್ ಮೈಸೂರಿಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಈ ಮೊದಲು ಪಾಟ್ನಾದಲ್ಲಿದ್ದ ವೈದ್ಯರು ಇತ್ತೀಚೆಗೆ ಮೈಸೂರಿನಲ್ಲಿ ಅಪಾರ್ಟ್ಮೆಂಟ್ ಖರೀದಿಸಿ ಸ್ಥಳಾಂತರಗೊಂಡಿದ್ದಾರೆ. ಅವರನ್ನು ಭೇಟಿಯಾದ ನಿತೀಶ್ ಕುಮಾರ್ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಬುಧವಾರ ಬೆಳಗ್ಗೆ 11:15ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ ನಿತೀಶ್ ಕುಮಾರ್ ಎರಡು ಖಾಸಗಿ ಕಾರ್ ಗಳಲ್ಲಿ ಪೊಲೀಸ್ ಭದ್ರತೆಯೊಂದಿಗೆ ಲಕ್ಷ್ಮಿಪುರಂನಲ್ಲಿರುವ ವೈದ್ಯರ ಕ್ಲಿನಿಕ್ ಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಎರಡು ಗಂಟೆ ಇದ್ದ ಅವರು ವೈದ್ಯರ ಬಳಿ ಚಿಕಿತ್ಸೆ ಪಡೆದು ಹಿಂತಿರುಗಿದ್ದಾರೆ. ನಿತೀಶ್ ಕುಮಾರ್ ಅವರೊಂದಿಗೆ ಜೆಡಿಯು ರಾಜ್ಯಸಭೆ ಸದಸ್ಯ ಸಂಜಯ್ ಕುಮಾರ್ ಝಾ, ಶಾಸಕ ಸಂಜೀವ್ ಕುಮಾರ್, ಬಿಜೆಪಿ ಮುಖಂಡ ರಜನೀಶ್ ಕುಮಾರ್ ಇದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read