BREAKING NEWS: ಬೈಕ್ ಓಡಿಸುತ್ತಿದ್ದಾಗಲೇ ಸವಾರನಿಗೆ ಹೃದಯಾಘಾತ: ತಡೆಗೋಡೆಗೆ ಡಿಕ್ಕಿ ಹೊಡೆದು ವ್ಯಕ್ತಿ ದುರ್ಮರಣ

ಮೈಸೂರು: ಬೈಕ್ ಓಡಿಸುತ್ತಿದ್ದಾಗಲೇ ಬೈಕ್ ಸವಾರನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿ ನಡೆದಿದೆ.

ಚಾಮರಾಜನಗರ ತಾಲೂಕಿನ ನಂಜೆದೇವರಪುರದ ರವಿ ಮೃತ ದುರ್ದೈವಿ. ಬೈಕ್ ಓಡಿಸಿಕೊಂಡು ಬರುತ್ತಿದ್ದ ವೇಳೆ ಏಕಏಕಿ ಹೃದಯಾಘಾತವಾಗಿದ್ದು, ಬೈಕ್ ಸವಾರ ಕೆಳಗೆ ಬೀಳುತ್ತಿರುವ ದೃಶ್ಯ ಸಿಸಿಟಿಯಿಯಲ್ಲಿ ಸೆರೆಯಾಗಿದೆ.

ಬೈಕ್ ಸವಾರನಿಗೆ ಹಾರ್ಟ್ ಅಟ್ಯಾಕ್ ಆಗುತ್ತಿದ್ದಂತೆ ನಿಯಂತ್ರಣ ತಪ್ಪಿದ ಬೈಕ್, ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಬೈಕ್ ಸವಾರ ರವಿ ಮೃತಪಟ್ಟಿದ್ದಾರೆ.

ಕುವೆಂಪುನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read