BIG NEWS : ಬಿಜೆಪಿ ಟಿಕೆಟ್ ಕೊಡಿಸೋದಾಗಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಅರೆಸ್ಟ್

ikceticketಬಳ್ಳಾರಿ : ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಿವೃತ್ತ ಎಂಜಿನಿಯರ್ ಓರ್ವರಿಗೆ ಕೋಟಿ ಕೋಟಿ ಹಣ ವಂಚಿಸಿದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಬಿಜೆಪಿಯ ಮಾಜಿ ಮುಖಂಡ ಹಾಗೂ ಹಾಲಿ ಕೆಆರ್ಪಿಪಿ ಪಕ್ಷದ ನಾಯಕ ರೇವಣ ಸಿದ್ದಪ್ಪನನ್ನು ಕೊಟ್ಟೂರು ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ಮೂಲದ ಶೇಖರ್ ಜೊತೆ ಸೇರಿ ಕೊಟ್ಟೂರಿನ ನಿವೃತ್ತ ಎಂಜಿನಿಯರ್ ಶಿವಮೂರ್ತಿ ಅವರಿಗೆಹಗರಿಬೊಮ್ಮನ ಹಳ್ಳಿ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಆರೋಪಿ ರೇವಣ ಸಿದ್ದಪ್ಪ 1.95 ಕೋಟಿ ರೂ. ಪಡೆದು ವಂಚಿಸಿದ್ದಾನೆ. ನಂತರ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಪೊಲೀಸರು ರಾಜಿ ಸಂಧಾನ ಮಾಡಿಸಿದ್ದರು.

ನಂತರ ಆರೋಪಿ ಹಣ ವಾಪಸ್ ನೀಡುವುದಾಗಿ ಎರಡು ಚೆಕ್ಗಳನ್ನು ನೀಡಿದ್ದರು ಎನ್ನಲಾಗಿದ್ದು, ಈ ಚೆಕ್ಗಳು ಬೌನ್ಸ್ ಆಗಿದ್ದವು. ಈ ಸಂಬಂಧ ಶಿವಮೂರ್ತಿ ಕೊಟ್ಟೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಸದ್ಯ, ಆರೋಪಿ ರೇವಣ ಸಿದ್ದಪ್ಪನನ್ನು ಕೊಟ್ಟೂರು ಪೊಲೀಸರು ಬಂಧಿಸಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read