BIG BREAKING: ಬಿಜೆಪಿ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ: ಲಿಂಬಾವಳಿ, ರಾಮದಾಸ್ ಗೆ ಕೈತಪ್ಪಿದ ಟಿಕೆಟ್

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದೆ. ಮೂರನೇ ಪಟ್ಟಿಯಲ್ಲಿ 10 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಮಹೇಶ್ ತೆಂಗಿನ ಕಾಯಿ

ಹೆಬ್ಬಾಳ -ಕಟ್ಟಾ ಜಗದೀಶ್

ಗೋವಿಂದರಾಜನಗರ -ಉಮೇಶ್ ಶೆಟ್ಟಿ

ಮಹಾದೇವಪುರ –ಮಂಜುಳಾ

ಹಗರಿಬೊಮ್ಮನಹಳ್ಳಿ –ಬಿ. ರಾಮಣ್ಣ

ನಾಗಠಾಣ -ಸಂಜಯ ಐಹೊಳೆ

ಸೇಡಂ -ರಾಜಕುಮಾರ ಪಾಟೀಲ್

ಕೊಪ್ಪಳ -ಮಂಜುಳಾ ಅಮರೇಶ್

ರೋಣ -ಕಳಕಪ್ಪ ಬಂಡಿ

ಕೃಷ್ಣರಾಜ ಕ್ಷೇತ್ರದಲ್ಲಿ ಎಸ್ಎ ರಾಮದಾಸ್ ಬದಲಿಗೆ ಶ್ರೀವತ್ಸ ಅವರಿಗೆ ಟಿಕೆಟ್ ನೀಡಲಾಗಿದೆ.

ಮಹದೇವಪುರದಲ್ಲಿ ಅರವಿಂದ ಲಿಂಬಾವಳಿಗೆ ಟಿಕೆಟ್ ತಪ್ಪಿದ್ದು, ಅವರ ಪತ್ನಿ ಮಂಜುಳಾ ಅವರಿಗೆ ಟಿಕೆಟ್ ಕೊಡಲಾಗಿದೆ.

ಕೆ.ಎಸ್. ಈಶ್ವರಪ್ಪ ಪ್ರತಿನಿಧಿಸುತ್ತಿದ್ದ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿಲ್ಲ.

224 ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದ್ದು, ಶಿವಮೊಗ್ಗ ನಗರ ಮತ್ತು ಮಾನ್ವಿ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read