ಬಿಜೆಪಿ ಹೈಕಮಾಂಡ್ ನಿಂದ ಕರ್ನಾಟಕದ ಲಿಂಗಾಯತರು, ಹಿಂದುಳಿದ ವರ್ಗ, ದಲಿತರಿಗೆ ಮಹಾ ದ್ರೋಹ; ಕಾಂಗ್ರೆಸ್ ಕಿಡಿ

ಬೆಂಗಳೂರು: ಬಿಜೆಪಿ ಹೈಕಮಾಂಡ್ ಕರ್ನಾಟಕದ ಲಿಂಗಾಯತರಿಗೆ, ಹಿಂದುಳಿದ ವರ್ಗದವರಿಗೆ, ದಲಿತರಿಗೆ ಮಹಾ ದ್ರೋಹ ಎಸಗಿದೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ.

ಕುಮಾರಸ್ವಾಮಿಯವರು ಹೇಳಿದ “ಪೇಶ್ವೆ ವಂಶಸ್ಥರಿಗೆ” ಎರಡೆರಡು ಬಾರಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಲಾಗುತ್ತದೆ, ಲಿಂಗಾಯತರಿಗೆ ಕ್ಯಾಬಿನೆಟ್ ದರ್ಜೆಯ ಮಂತ್ರಿಗಿರಿ ಕೊಡದಿರುವುದು ಬಿಜೆಪಿಯ ಲಿಂಗಾಯತ ವಿರೋಧಿ ಧೋರಣೆಗೆ ಸಾಕ್ಷಿ ಎಂದು ಕಿಡಿಕಾರಿದೆ.

ಕರ್ನಾಟಕದ ಬಿಜೆಪಿಯಲ್ಲಿ ದಲಿತರು, ಹಿಂದುಳಿದವರಿಗೆ ಸ್ಥಾನವೂ ಇಲ್ಲ, ಮಾನವೂ ಇಲ್ಲ ಎನ್ನುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಮಾಜಿಕ ನ್ಯಾಯ ಎನ್ನುವುದು ಬಿಜೆಪಿಯ ಬೈಲಾದಲ್ಲೇ ಇಲ್ಲ! ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read