ಜಗದೀಶ್ ಶೆಟ್ಟರ್ ಆಪ್ತರಿಗೆ ಶಾಕ್: ಬಿಜೆಪಿಯಿಂದ 27 ಮುಖಂಡರಿಗೆ ಗೇಟ್ ಪಾಸ್

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ 27 ಆಪ್ತರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ 27 ಜನರನ್ನು ಉಚ್ಚಾಟನೆ ಮಾಡಲಾಗಿದೆ.

ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಬಿಜೆಪಿ ಬ್ಲಾಕ್ ಅಧ್ಯಕ್ಷ ಸಂತೋಷ್ ಆದೇಶ ಹೊರಡಿಸಿದ್ದಾರೆ. ನಿಗಮ -ಮಂಡಳಿ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳ ಉಚ್ಚಾಟನೆ ಮಾಡಲಾಗಿದೆ. ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಹೇಶ್ ಟೆಂಗಿನಕಾಯಿ ಸ್ಪರ್ಧಿಸಿದ್ದಾರೆ. ಪಕ್ಷದ ಅಭ್ಯರ್ಥಿ ಇದ್ದರೂ, ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರವಾಗಿ ನಿಂತಿದ್ದ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಸಾಹುಕಾರ, ನಾಗೇಶ ಕಲಬುರ್ಗಿ, ರಾಧಾ ಪಟ್ಟಣಶೆಟ್ಟಿ, ಮಹೇಶ ಪತ್ತಾರ, ವಿರೂಪಾಕ್ಷಿ ರಾಯನಗೌಡ ಸೇರಿದಂತೆ 27 ಜನರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read