ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ –ಜೆಡಿಎಸ್ ಒಟ್ಟಿಗೆ ಹೋರಾಟ: ಹೆಚ್.ಡಿ.ಕೆ.

ಬೆಂಗಳೂರು: ಬಿಜೆಪಿ -ಜೆಡಿಎಸ್ ಒಟ್ಟಿಗೆ ಸೇರಿ ಸರ್ಕಾರದ ವಿರುದ್ಧ ಹೋರಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಧರಣಿ ನಿರತರಿಗೆ ಶಿಕ್ಷೆ ಕೊಡಲು ಭೋಜನ ವಿರಾಮಕ್ಕೆ ಬಿಡದೇ ಡೆಪ್ಯುಟಿ ಸ್ಪೀಕರ್ ಕಲಾಪ ನಡೆಸಿದರು. ಮುಖ್ಯಮಂತ್ರಿ ಸೂಚನೆ ಮೇರೆಗೆ ಡೆಪ್ಯುಟಿ ಸ್ಪೀಕರ್ ಕಲಾಪ ಮುಂದುವರೆಸಿದ್ದರು. ಹಸಿವಿನಿಂದ ಆಕ್ರೋಶಗೊಂಡು ಕೆಲವರು ಕಾಗದ ಪತ್ರ ಹರಿದಿದ್ದಾರೆ ಎಂದರು.

ಸ್ಪೀಕರ್ ಪೀಠದಲ್ಲಿ ಕುಳಿತ ಮೇಲೆ ಯಾವುದೇ ಸಮುದಾಯಕ್ಕೆ ಸೇರಲ್ಲ. ಸ್ಪೀಕರ್ ಪೀಠದಲ್ಲಿ ಕುಳಿತವರು 224 ಶಾಸಕರಿಗೆ ರಕ್ಷಣೆ ಕೊಡಬೇಕು. ದಲಿತ ಶಾಸಕರಿಗೆ ಅವಮಾನ ಮಾಡಿದ್ದಾರೆ ಎಂದು ಅನುಕಂಪ ಗಿಟ್ಟಿಸಲು ಯತ್ನ ನಡೆಸಲಾಗಿದೆ. ಇಂತಹ ರಾಜಕೀಯ ಗಿಮಿಕ್ ಹೆಚ್ಚು ದಿನ ನಡೆಯುವುದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕೆ. ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read