ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಹಿನ್ನೆಲೆ; ಗೋಮೂತ್ರ ಸಿಂಪಡಿಸಿ ಸ್ವಚ್ಛಗೊಳಿಸಿದ ವಾಟಾಳ್ ನಾಗರಾಜ್

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ನಡೆಸಿದ ಹಿನ್ನೆಲೆಯಲ್ಲಿ ಮೈಸೂರನ್ನು ಶುದ್ಧಗೊಳಿಸುವ ನಿಟ್ಟಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಗೋಮೂತ್ರ ಸಿಂಪಡಿಸಿ ಸ್ವಚ್ಛಗೊಳಿಸಿ ಗಮನಸೆಳೆದರು.

ಮೈಸೂರಿನ ಕೋಟೆ ಆಂಜನೇಯ ದೇವಾಲಯದ ಬಳಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸ್ವಚ್ಛತಾ ಚಳುವಳಿ ನಡೆಸಲಾಯಿತು.

ಈ ವೇಳೆ ಮಾತನಾಡಿದ ವಾಅಟಾಳ್ ನಾಗರಾಜ್, ಮೈಸೂರಿಗೆ ಕಳ್ಳರು, ಸುಳ್ಳರು, ಭ್ರಷ್ಟರ ಪಾಪದ ಧೂಳು ತಗುಲಿದೆ. ಪಾಪದ ಧೂಳು ತೊಲಗಲಿ ಎಂದು ಗೋಮೂತ್ರ ಸಿಂಫಡಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ಅಪವಿತ್ರವಾದ ಮೈಸೂರು ಶುದ್ಧವಾಗಲಿ ಎಂದು ಸ್ವಚ್ಚತೆ ಮಾಡುತ್ತೀದ್ದೇವೆ ಎಂದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read