ಮಹಿಳೆ ಜೊತೆ ಅಸಭ್ಯ ವರ್ತನೆ, ಲೈಂಗಿಕ ಕಿರುಕುಳ: ಬಿಜೆಪಿ ಮುಖಂಡನ ವಿರುದ್ಧ ಕೇಸ್ ದಾಖಲು

ರಾಮನಗರ: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚನ್ನಪಟ್ಟಣ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಟಿ.ಎಸ್. ರಾಜು ವಿರುದ್ಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ಆರೋಪಿ ರಾಜು ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ತೂಬಿನಕೆರೆಯವರಾದ ಮಹಿಳೆ ಬೆಂಗಳೂರಿನಲ್ಲಿ ನೆಲೆಸಿದ್ದು, ಗಣಪತಿ ಹಬ್ಬಕ್ಕೆ ಊರಿಗೆ ಬಂದಿದ್ದಾರೆ. ಸೆ. 7ರಂದು ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ನೋಡಲು ತಾಯಿಯೊಂದಿಗೆ ಮನೆ ಮುಂದೆ ನಿಂತಿದ್ದರು. ಅವರ ತಾಯಿ ಮನೆಯೊಳಗೆ ಹೋಗಿದ್ದು, ಆಗ ಮಹಿಳೆ ಸಮೀಪಕ್ಕೆ ಬಂದ ರಾಜು ಯಾವಾಗ ಬಂದೆ ಬೇಬಿ ಎಂದು ಹೇಳಿ ಹೆಗಲ ಮೇಲೆ ಕೈ ಹಾಕಿ ಎದೆ ಭಾಗ ಮುಟ್ಟಿ ಕೈ ಹಿಡಿದು ಎಳೆದಾಡಿದ್ದಾನೆ. ಮೊಬೈಲ್ ನಲ್ಲಿ ಫೋಟೋ ಸೆರೆ ಹಿಡಿದು ಬೇರೆಯವರಿಗೆ ಕಳಿಸಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ.

ಆತನ ವರ್ತನೆಯಿಂದ ಆಘಾತಗೊಂಡು ಮನೆಯೊಳಗಿದ್ದ ಅಣ್ಣನಿಗೆ ವಿಷಯ ತಿಳಿಸಿದಾಗ ಅವರು ಬಂದು ಪ್ರಶ್ನಿಸಿದ್ದಾರೆ. ಕುಟುಂಬದ ಎಲ್ಲರೂ ರಾಜುನನ್ನು ತರಾಟೆಗೆ ತೆಗೆದುಕೊಂಡು ಮೊಬೈಲ್ ಕಸಿದುಕೊಂಡಿದ್ದಾರೆ. ತನಿಖೆಯ ವೇಳೆ ಮೊಬೈಲ್ ಹಾಜರುಪಡಿಸುವುದಾಗಿ ಮಹಿಳೆ ತಿಳಿಸಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಟಿ.ಎಸ್. ರಾಜುನನ್ನು ಬಿಜೆಪಿ ಪಕ್ಷದಿಂದ ಅಮಾನತು ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read