ಪುರಿ ಜಗನ್ನಾಥನೇ ಮೋದಿಯ ಭಕ್ತ ಎಂಬ ಹೇಳಿಕೆಗೆ ಪ್ರಾಯಶ್ಚಿತ್ತವಾಗಿ ಮೂರು ದಿನ ಉಪವಾಸ

ಭುವನೇಶ್ವರ: ಪುರಿ ಜಗನ್ನಾಥನೇ(ದೇವರು) ಪ್ರಧಾನಿ ನರೇಂದ್ರ ಮೋದಿಯವರ ಭಕ್ತ ಎಂಬುದಾಗಿ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ, ಪುರಿ ಕ್ಷೇತ್ರದ ಅಭ್ಯರ್ಥಿ ಸಂಬಿತ್ ಪಾತ್ರ ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಕ್ಷಮೆ ಕೇಳಿದ್ದಾರೆ. ಇಂತಹ ಹೇಳಿಕೆ ನೀಡಿದ್ದಕ್ಕೆ ಪ್ರಾಯಶ್ಚಿತ್ತವಾಗಿ ಮೂರು ದಿನ ಉಪವಾಸ ಇರುವುದಾಗಿ ತಿಳಿಸಿದ್ದಾರೆ.

ಪುರಿ ಜಗನ್ನಾಥನೇ ಮೋದಿಯ ಭಕ್ತ ಎಂದು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಸಂಬಿತ್ ಪಾತ್ರ ಕ್ಷಮೆ ಯಾಚಿಸಿದ್ದಾರೆ. ದೇವರೇ ಮನುಷ್ಯನಿಗೆ ಭಕ್ತನಾಗಲು ಸಾಧ್ಯವಿಲ್ಲ. ನಾನು ಬಾಯಿ ತಪ್ಪಿನಿಂದ ಈ ರೀತಿ ಜಗನ್ನಾಥನೇ ಮೋದಿಯ ಭಕ್ತ ಎಂದು ಹೇಳಿದ್ದೇನೆ. ಈ ಹೇಳಿಕೆ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದೆ. ನನ್ನ ಉದ್ದೇಶ ಇದಾಗಿರಲಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದಲ್ಲಿ ಕ್ಷಮೆ ಕೇಳುತ್ತೇನೆ. ಪ್ರಾಯಶ್ಚಿತ್ತವಾಗಿ ಮೂರು ದಿನ ಉಪವಾಸ ಇರುತ್ತೇವೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read