ಹಿರಿಯರನ್ನು ಕಡೆಗಣಿಸಬೇಡಿ ಎಂಬ ಮಾತಿಗೆ ಮಣೆ ಹಾಕದ ಹೈಕಮಾಂಡ್: ಡೇಂಜರ್ ಜೋನ್ ನಲ್ಲಿ ಬಿಜೆಪಿ; ಪಕ್ಷ ಕಟ್ಟಿ ಬೆಳೆಸಿದವರಿಗೇ ಸಿಗದ ಟಿಕೆಟ್

ರಾಜ್ಯ ವಿಧಾನಸಭೆ ಚುನಾವಣೆಗೆ ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುವ ಬಿಜೆಪಿ ಹೈಕಮಾಂಡ್ ರಾಜ್ಯದ ಘಟಾನುಘಟಿ ನಾಯಕರಿಗೆ ಶಾಕ್ ನೀಡಿದೆ.

ರಾಜ್ಯದಲ್ಲಿ ಪಕ್ಷ ಕಟ್ಟಿ ಬೆಳೆಸಿದ ಮತ್ತು ನಿರಂತರವಾಗಿ ಗೆಲುವು ಸಾಧಿಸಿ ಪಕ್ಷಕ್ಕೆ ಭದ್ರ ನೆಲೆ ಒದಗಿಸಿದ ಪ್ರಮುಖ ನಾಯಕರಿಗೇ ಈ ಬಾರಿ ಟಿಕೆಟ್ ನೀಡದಿರುವುದು ಪಕ್ಷದಲ್ಲಿ ಸುನಾಮಿಯನ್ನೇ ಸೃಷ್ಟಿಸಿದೆ. ಬರೋಬ್ಬರಿ 35 ಮಂದಿ ಹಿರಿಯ ನಾಯಕರಿಗೆ ಟಿಕೆಟ್ ಕೈತಪ್ಪುತ್ತಿರುವುದು ಬಿಜೆಪಿಯಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಹಿರಿಯರನ್ನು ಸಂಪೂರ್ಣವಾಗಿ ಕಡೆಗಣಿಸಬೇಡಿ. ಹಿರಿಯರ ಜೊತೆಗೆ ಹೊಸಬರಿಗೂ ಅವಕಾಶ ಕೊಡಿ ಎಂದು ರಾಜ್ಯ ನಾಯಕರು ಮಾಡಿದ ಮನವಿಗೆ ಬಿಜೆಪಿ ಹೈಕಮಾಂಡ್ ಸ್ಪಂದಿಸಿಲ್ಲ. ಪ್ರಯೋಗಕ್ಕೆ ಮುಂದಾದ ಬಿಜೆಪಿ ವರಿಷ್ಠರು ಪಕ್ಷವನ್ನು ಡೇಂಜರ್ ಜೋನ್ ಗೆ ತಂದಿಟ್ಟಿದ್ದಾರೆ ಎಂಬ ಮಾತುಗಳು ಬಿಜೆಪಿ ಪಾಳಯದಲ್ಲಿ ಕೇಳಿ ಬಂದಿವೆ.

ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದ ನಾಯಕರನ್ನೇ ಕಡೆಗಣಿಸುತ್ತಿರುವುದು ಸರಿಯಲ್ಲ. ಹಳಬರ ಜೊತೆಗೆ ಹೊಸಬರಿಗೂ ಅವಕಾಶ ಕೊಡಬೇಕೆಂಬ ಮಾತುಗಳು ಕೇಳಿ ಬಂದಿವೆ. ಆದರೆ ಈಗಾಗಲೇ ಕಾಲ ಮೀರಿ ಹೋಗಿದ್ದು ಬಿಜೆಪಿ ನಾಯಕರು 35 ಮಂದಿಗೆ ಹಿರಿಯರಿಗೆ ಗೇಟ್ ಪಾಸ್ ನೀಡಿದ್ದಾರೆ. ಕೆಲವೇ ಕ್ಷಣಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read