BIG NEWS : ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಜುಲೈ 4 ರಂದು ಬಿಜೆಪಿ ಪ್ರತಿಭಟನೆ : ಮಾಜಿ ಸಿಎಂ BSY

ಬೆಂಗಳೂರು :  ರಾಜ್ಯ ಸರ್ಕಾರದ ವೈಫಲ್ಯ ವಿರುದ್ಧ ಸಾವಿರಾರು ಕಾರ್ಯಕರ್ತರ ಜೊತೆ ಜುಲೈ 4 ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ‘ಗ್ಯಾರಂಟಿ ಅನುಷ್ಠಾನ ಸಂಬಂಧ ರಾಜ್ಯ ಸರ್ಕಾರದ ವೈಫಲ್ಯ ವಿರುದ್ಧ ಸಾವಿರಾರು ಕಾರ್ಯಕರ್ತರ ಜೊತೆ ಪ್ರತಿಭಟನೆ ನಡೆಸಲಿದ್ದೇವೆ ಎಂದರು.
ಪ್ರತಿಭಟನೆಯಲ್ಲಿ ನಾನು ಕೂಡ ಭಾಗಿಯಾಗುತ್ತೇನೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ದೆಹಲಿಗೆ ಬರಲು ಹೇಳಿದ್ದಾರೆ. ಯಾವ ವಿಚಾರಕ್ಕೆ ಎಂಬುದು ಗೊತ್ತಿಲ್ಲ. ದೆಹಲಿಗೆ ಹೋಗಿ ಬರುತ್ತೇನೆ. ನಾಡಿದ್ದು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ವಿಧಾನಸೌಧದ ಮುಂದೆ ಇರುವ ಗಾಂಧಿ ಪ್ರತಿಮೆ ಬಳಿ ಧರಣಿ ಸತ್ಯಾಗ್ರಹ ಮಾಡಲು  ಬಿಜೆಪಿ      ತೀರ್ಮಾನ ಮಾಡಿದ್ದು, ಬಿಜೆಪಿ ಮುಖಂಡರು, ಶಾಸಕರು  ಬೆಳಗ್ಗೆಯಿಂದ ಸಂಜೆಯವರೆಗೆ ಕಾರ್ಯಕರ್ತರ ಜೊತೆ ಧರಣಿ ನಡೆಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read