ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಮುಖಂಡರಿಂದ ಹಲ್ಲೆ

ಬೆಂಗಳೂರು: ವಿಧಾನಸಭೆ ಚುನಾವಣೆ ಗಲಾಟೆ ವೇಳೆ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ. ಬಿಟಿಎಂ ಲೇಔಟ್ ವಿಧಾನಸಭೆ ಕ್ಷೇತ್ರದ ಮಡಿವಾಳದಲ್ಲಿ ಬಿಜೆಪಿ ಕಾರ್ಯಕರ್ತ ಹರಿನಾಥ್ ಮೇಲೆ ಕಾಂಗ್ರೆಸ್ ಮುಖಂಡರು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ.

ಮಾಜಿ ಮೇಯರ್ ಮಂಜುನಾಥ್, ಪುತ್ರ ಲಿತೇಶ್ ಸೇರಿದಂತೆ ಮೂವರ ವಿರುದ್ಧ ದೂರು ದಾಖಲಾಗಿದೆ. ಬಿಜೆಪಿ ಮಂಡಲ ಅಧ್ಯಕ್ಷರ ಮನೆಗೆ ಹೋಗುತ್ತಿದ್ದ ವೇಳೆ ದಾಳಿ ಮಾಡಿದ ಕಾಂಗ್ರೆಸ್ ಮುಖಂಡರು ಹರಿನಾಥ್ ಮೇಲೆ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ.

ಹರಿನಾಥ್ ಗೆ 8 ಹೊಲಿಗೆ ಹಾಕಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಬಿಟಿಎಂ ಲೇಔಟ್ ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ ತಿಳಿಸಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಪೊಲೀಸರು ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read