ವಿಜಯಪುರ; ವಿಜಯಪುರದಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು ಕೇಳಿಬಂದಿದ್ದು, ದುಷ್ಕರ್ಮಿಗಳು ರೌಡಿಶೀಟರ್ ಮೇಲೆ ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದರು. ಆದರೆ ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯೆ ರೌಡಿಶೀಟರ್ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ರೌಡಿಶೀಟರ್ ಭೀಮನಗೌಡ ಬೀರಾದಾರ್ ಮೇಲೆ ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದರು. ಗಾಯಗೊಂಡ ಭೀಮನಗೌಡನನ್ನು ವಿಜಯಪುರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯೆ ರೌಡಿಶೀಟರ್ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಭೀಮನಗೌಡಗೆ 3 ಸುತ್ತು ಗುಂಡು ಹಾರಿಸಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದರು. ಹೇರ್ ಕಟಿಂಗ್ ಮಾಡಿಸಿಕೊಳ್ಳುವಾಗ ಕಣ್ಣಿಗೆ ಖಾರದ ಪುಡಿ ಎರಚಿ ಕೃತ್ಯ ನಡೆಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಚಡಚಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.