BREAKING: ಕಿಲ್ಲರ್ ಬಿಎಂಟಿಸಿಗೆ ಬೈಕ್ ಸವಾರ ಬಲಿ

ಬೆಂಗಳೂರು: ಬೆಂಗಳೂರಿನಲ್ಲಿ ಕೆಲ್ಲರ್ ಬಿಎಂಟಿಸಿಗೆ ಬೈಕ್ ಸವಾರ ಬಲಿಯಾಗಿದ್ದಾರೆ. ಮುಂದೆ ತೆರಳುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದೆ,

ಡಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದಿದ್ದ ಸವಾರನ ಮೇಲೆಯೇ ಬಿಎಂಟಿಸಿ ಬಸ್ ಚಲಿಸಿದೆ. ಬೈಕ್ ನಲ್ಲಿದ್ದ ಸವಾರ ಸಾವನ್ನಪ್ಪಿದ್ದು, ಮೃತ ಯುವಕನ ಗುರುತು ಪತ್ತೆಯಾಗಿಲ್ಲ.

ಆನೇಕಲ್ ತಾಲೂಕಿನ ಜಿಗಣಿ ಹಳೆ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಆಕ್ರೋಶಗೊಂಡ ಸ್ಥಳೀಯರು ಬಿಎಂಟಿಸಿ ಬಸ್ ನ ಗ್ಲಾಸ್ ಪುಡಿ ಪುಡಿ ಮಾಡಿದ್ದು, ಬಿಎಂಟಿಸಿ ಬಸ್ ಚಾಲಕನಿಗೆ ಹಿಗ್ಗಾಮುಗ್ಗಾ ತೋರಿಸಿದ್ದಾರೆ. ಘಟನೆ ಸ್ಥಳಕ್ಕೆ ಜಿಗಣಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವಕನ ಗುರುತು ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read