ಮರದಿಂದ ಬಿದ್ದು ಬಿಎಂಟಿಸಿ ಚಾಲಕ ಸಾವು

ಬೆಂಗಳೂರು: ಹಲಸಿನ ಹಣ್ಣು ಕೀಳುವಾಗ ಮರದ ಮೇಲಿಂದ ಬಿದ್ದು ಬಸ್ ಚಾಲಕ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಅರಳಸಂದ್ರ ಗ್ರಾಮದಲ್ಲಿ ನಡೆದಿದೆ.

ಮಂಜುನಾಥ(43) ಮೃತಪಟ್ಟವರು. ಪೀಣ್ಯದ ಬಿಎಂಟಿಸಿ ಡಿಪೋ 9 ರಲ್ಲಿ ಮಂಜುನಾಥ್ ಕಾರ್ಯನಿರ್ವಹಿಸುತ್ತಿದ್ದರು. ಹಲಸಿನ ಹಣ್ಣು ಕೀಳುವಾಗ ಆಯತಪ್ಪಿ ಮರದ ಮೇಲಿಂದ ಬಿದ್ದು ಮೃತಪಟ್ಟಿದ್ದಾರೆ. ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ರವಾನಿಸಲಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read