‘ನನ್ನ ಬೂತ್ ಶಕ್ತಿಶಾಲಿ ಬೂತ್’: ಬಿಜೆಪಿಯಿಂದ ಮೋದಿ ಸರ್ಕಾರದ ಸಾಧನೆಯ ಕರ ಪತ್ರ ಹಂಚಿಕೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ‘ಮೇರಾ ಬೂತ್ ಸಬ್ಸೆ ಮಜಬೂತ್’(ನನ್ನ ಬೂತ್ ಶಕ್ತಿಶಾಲಿ ಬೂತ್) ಎಂಬ ವಿಚಾರದೊಂದಿಗೆ ಇಂದಿನಿಂದ ಬಿಜೆಪಿ ದೇಶಾದ್ಯಂತ ಎಲ್ಲಾ ಮಂಡಲ ಕೇಂದ್ರಗಳಲ್ಲಿ ಅಭಿಯಾನ ಕೈಗೊಂಡಿದೆ.

ರಾಜ್ಯದ 300 ಕೇಂದ್ರಗಳಲ್ಲಿ ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಬೂತ್ ಅಧ್ಯಕ್ಷರು, ಕಾರ್ಯಕರ್ತರು ಅಭಿಯಾನ ಕೈಗೊಳ್ಳಲಿದ್ದಾರೆ. ಪ್ರಧಾನಿ ಮೋದಿ ಭಾಷಣದ ಬಳಿಕ ಎಲ್ಲ ಮನೆಗಳಿಗೆ ತೆರಳಿ ಕರಪತ್ರ ವಿತರಿಸಲು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಲಾಗಿದೆ.

ಮನೆ ಮನೆಗೆ ಗ್ಯಾಸ್ ಸಿಲಿಂಡರ್, ರೈತರ ಬ್ಯಾಂಕ್ ಖಾತೆಗೆ 6 ಸಾವಿರ ರೂಪಾಯಿ ಜಮೆ, ಕೊರೋನಾ ಸಂದರ್ಭದಲ್ಲಿ ಎಲ್ಲರಿಗೂ ಉಚಿತವಾಗಿ ಲಸಿಕೆ, ವಿಮಾನ ನಿಲ್ದಾಣ ನಿರ್ಮಾಣ, ವೈದ್ಯಕೀಯ ಕಾಲೇಜುಗಳ ಸ್ಥಾಪನೆ, ರೈತರಿಗೆ ವಿಮಾ ಯೋಜನೆ ಸೇರಿದಂತೆ ದೇಶದ ಮೂಲ ಅವಶ್ಯಕತೆ ಈಡೇರಿಸುವ ನಿಟ್ಟಿನಲ್ಲಿ ಕೈಗೊಂಡ ವಿವಿಧ ಯೋಜನೆಗಳು, ಸಾಧನೆಗಳ ಬಗ್ಗೆ ಕರಪತ್ರದ ಮೂಲಕ ಮಾಹಿತಿ ನೀಡಲಾಗುವುದು.

ಮುಂದಿನ ಒಂದು ವಾರ ಕಾಲ ಕಾರ್ಯಕರ್ತರು ಮನೆಮನೆಗೆ ಹೋಗಿ ಕೇಂದ್ರ ಸರ್ಕಾರದ ತಲಾ 5 ಕೆಜಿ ಅಕ್ಕಿ ವಿತರಣೆ ಸೇರಿದಂತೆ ಸಾಧನೆಗಳನ್ನು ತಿಳಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read