ಜಮೀನಿಗೆ ತೆರಳುತ್ತಿದ್ದ ಬಾಲಕ ಕಾಲು ಜಾರಿ ಕಾಲುವೆಗೆ ಬಿದ್ದು ಸಾವು

ಮಂಗಳವಾರದಂದು ಶಾಲೆ ಮುಗಿಸಿಕೊಂಡು ಮನೆಗೆ ಬಂದಿದ್ದ 13 ವರ್ಷದ ಬಾಲಕನೊಬ್ಬ ಬಳಿಕ ಜಮೀನಿನಲ್ಲಿದ್ದ ತಂದೆಯನ್ನು ಭೇಟಿಯಾಗಲು ತೆರಳುತ್ತಿದ್ದ ವೇಳೆ ಕಾಲುವೆಗೆ ಜಾರಿ ಬಿದ್ದು ಸಾವನಪ್ಪಿದ್ದಾನೆ.

ಇಂತಹದೊಂದು ಘಟನೆ ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಚಿಕ್ಕ ಆಸಂಗಿ ಗ್ರಾಮದಲ್ಲಿ ನಡೆದಿದ್ದು, ಕಲ್ಲಯ್ಯ ಹಿರೇಮಠ ಎಂಬ ಬಾಲಕ ಮೃತಪಟ್ಟಿದ್ದಾನೆ. ಈತನ ಶವ ಇಂದು ಬೆಳಿಗ್ಗೆ ಪತ್ತೆಯಾಗಿದೆ.

ಜಮೀನಿಗೆ ಹೋಗುತ್ತಿದ್ದ ಬಾಲಕ ಕಾಲುವೆಗೆ ಬಿದ್ದಿದ್ದು, ಈ ವಿಚಾರ ಯಾರ ಗಮನಕ್ಕೂ ಬಂದಿಲ್ಲ. ಮಗ ರಾತ್ರಿಯಾದರೂ ಬಾರದ ಕಾರಣ ಗಾಬರಿಗೊಂಡ ಪೋಷಕರು ಹುಡುಕಾಟ ನಡೆಸಿದ್ದು, ಇಂದು ಬೆಳಗ್ಗೆ ಕಾಲುವೆಯಲ್ಲಿ ಆತನ ಶವ ಪತ್ತೆಯಾಗಿದೆ. ಪುತ್ರನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಈಗ ಮುಗಿಲು ಮುಟ್ಟಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read