BIG NEWS: ರಾಜ್ಯಾದ್ಯಂತ ಇಂದಿನಿಂದ ಬಿಪಿಎಲ್ ಕಾರ್ಡ್ ಪರಿಶೀಲನೆ

ಬೆಂಗಳೂರು: ರಾಜ್ಯದಲ್ಲಿ ಅರ್ಹರ ಬಿಪಿಎಲ್ ಕಾರ್ಡು ರದ್ದು ವಿಚಾರ ಬಿರುಗಾಳಿ ಎಬ್ಬಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಅರ್ಹರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡದಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅರ್ಹ ಫಲಾನುಭವಿಗಳ ಕಾರ್ಡ್ ರದ್ದಾಗಿದ್ದಲ್ಲಿ ಮತ್ತೆ ನೀಡಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ಅಂತೆಯೇ ಇಂದಿನಿಂದ ಆಹಾರ ಇಲಾಖೆ ಅಧಿಕಾರಿಗಳು ಬಿಪಿಎಲ್ ಕಾರ್ಡುಗಳ ಪರಿಷ್ಕರಣೆ ಮತ್ತು ತಿದ್ದುಪಡಿ ಕೈಗೊಂಡಿದ್ದಾರೆ. ಆಹಾರ ಇಲಾಖೆ ಸ್ಥಳೀಯ ಕಚೇರಿಯಲ್ಲಿ ಪರಿಷ್ಕರಣೆ ಕಾರ್ಯ ನಡೆಯಲಿದೆ. ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ರದ್ದಾಗಿರುವ ಬಿಪಿಎಲ್ ಕಾರ್ಡ್ ಗಳ ತಿದ್ದುಪಡಿ ಕಾರ್ಯ ನಡೆಯಲಿದೆ. ಆಧಾರ್, ಪಾನ್ ಕಾರ್ಡ್, ಐಟಿ ರಶೀದಿ ಮೂಲಕ ಅರ್ಹತೆ ಹೊಂದಿದವರು ಕಾರ್ಡುಗಳನ್ನು ಸರಿಪಡಿಸಿಕೊಳ್ಳಬಹುದಾಗಿದೆ ಎನ್ನಲಾಗಿದೆ.

ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸರ್ಕಾರಿ ನೌಕರರೇ, ತೆರಿಗೆ ಪಾವತಿದಾರರೇ ಎಂಬುದರ ಬಗ್ಗೆ ಪರಿಶೀಲನೆ ನಡೆಸುವರು. ಕಾರ್ಡ್ ಹೊಂದಿದವರು ಬಡವರೇ, ಶ್ರೀಮಂತರೇ ಎಂದು ಮನೆ ಪರಿಶೀಲಿಸಿ ಆರ್ಡಿ ನಂಬರ್, ಜೊತೆಗೆ ದಾಖಲೆ ಪರಿಶೀಲಿಸಲಿದ್ದಾರೆ. ಕಾರ್ಡ್ ಬದಲಾಯಿಸಲು ಕನಿಷ್ಠ 10 ರಿಂದ 15 ದಿನ ಸಮಯಾವಕಾಶ ಬೇಕಾಗುತ್ತದೆ ಎನ್ನಲಾಗಿದೆ.

ಅರ್ಹತೆ ಇದ್ದರೂ ಬಿಪಿಎಲ್ ಕಾರ್ಡು ರದ್ದಾದವರಿಗೆ ಪರಿಶೀಲನೆ ಬಳಿಕ ತಿದ್ದುಪಡಿ ಕಾರ್ಡ್ ನೀಡಲಾಗುವುದು. ಈಗಾಗಲೇ ಅಂತಹ ಕಾರ್ಡ್ ದಾರರು ಪಡಿತರ ಪಡೆದುಕೊಳ್ಳಬಹುದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read