BREAKING : ‘ಅತ್ಯಾಚಾರ ಪ್ರಕರಣ’ದಲ್ಲಿ ನ್ಯಾಯ ಸಿಗಬೇಕು ಎಂದು ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ.!

ಬೆಂಗಳೂರು : ಬೆಂಗಳೂರಿನ ಹಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ.

ರಾಜರಾಜೇಶ್ವರಿ ನಗರ, ಕುಂಬಳಗೋಡು, ಕಲಾಸಿಪಾಳ್ಯದ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಹೈದರಾಬಾದ್ ನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಬೇಕು. ನ್ಯಾಯ ಕೊಡಿಸದಿದ್ರೆ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಇಮೇಲ್ ಕಳುಹಿಸಿದ್ದಾರೆ. ಖಾಸಗಿ ಶಾಲೆಗಳನ್ನು ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ.

ಈ ಹಿನ್ನೆಲೆ ಅಲರ್ಟ್ ಆದ ಪೊಲೀಸರು ಬಾಂಬ್ ಬೆದರಿಕೆ ಬಂದ ಶಾಲೆಗಳಿಗೆ ಬಾಂಬ್ ಸ್ಕ್ವಾಡ್ ಸಮೇತ ದೌಡಾಯಿಸಿ ತಪಾಸಣೆ ನಡೆಸಿದ್ದಾರೆ.

ಹಾಸನದಲ್ಲೂ ಬಾಂಬ್ ಬೆದರಿಕೆ

ಅದೇ ರೀತಿ ಹಾಸನದ 3 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ದೌಡಾಯಿಸಿ ತಪಾಸಣೆ ನಡೆಸಿದ್ದಾರೆ.

ಹಾಸನದ ವಿದ್ಯಾಸೌಧ ಪಬ್ಲಿಕ್ ಶಾಲೆ, ಕಿಡ್ಸ್ ಶಾಲೆ ಸೇರಿ ಹಾಸನದ 3 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಶಾಲೆಯ ಕಟ್ಟಡವನ್ನು ಸ್ಪೋಟಿಸುವುದಾಗಿ ಬೆದರಿಕೆಯೊಡ್ಡಲಾಗಿದ್ದು, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಹಾಸನ ನಗರ, ಗ್ರಾಮಾಂತರ ಠಾಣೆಗೆ ಶಾಲೆಯ ಮುಖ್ಯೋಪಾಧ್ಯಾಯರು ದೂರು ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read