BREAKING: ಅನ್ನಭಾಗ್ಯ ಯೋಜನೆ; ಹಣ ಕೊಡುವ ವಿಚಾರಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5ಕೆಜಿ ಹೆಚ್ಚುವರಿ ಅಕ್ಕಿ ಬದಲಾಗಿ ಹಣ ನೀಡುವ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಟ್ವಿಸ್ಟ್ ನೀಡಿದ್ದಾರೆ. ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಇಂದಿನಿಂದಲೇ ಹಣ ನೀಡುವ ಪ್ರಕ್ರಿಯೆ ಆರಂಭ ಎಂದು ಹೇಳಿದ್ದರೆ, ಸಿಎಂ ಸಿದ್ದರಾಮಯ್ಯ ಜುಲೈ 10ರಿಂದ ಕೊಡುತ್ತೇವೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜುಲೈ 1ರಿಂದಲೇ ಹಣ ಕೊಡುತ್ತೇವೆ ಎಂದು ಹೇಳಿಲ್ಲ, ಜುಲೈ 10ರಿಂದ ಹಣ ಕೊಡುವ ಪ್ರಕ್ರಿಯೆ ಆರಂಭವಾಗುತ್ತದೆ ಎಂದರು.

1 ಕೋಟಿ 28 ಲಕ್ಷ ಕಾರ್ಡ್ ಗಳ ಪೈಕಿ 99.99% ಆಧಾರ್ ಸೀಡಿಂಗ್ ಆಗಿದೆ. 1 ಕೋಟಿ 22 ಲಕ್ಷ ಕಾರ್ಡ್ ಗಳಿಗೆ ಬ್ಯಾಂಕ್ ಅಕೌಂಟ್ ಲಿಂಕ್ ಆಗಿದೆ. ಬಾಕಿ ಉಳಿದಿರುವ 6 ಲಕ್ಷ ಕಾರ್ಡ್ ಗಳು ಆಧಾರ್ ಲಿಂಕ್ ಆಗಬೇಕು. ಹಾಗಾಗಿ ಜುಲೈ ತಿಂಗಳಲ್ಲೇ ಹಣ ಹಾಕುತ್ತೇವೆ. 10ರಿಂದ ಆರಂಭವಾಗಬಹುದು ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read