BREAKING: ಅರಸಿಕೆರೆ JDS ಅಭ್ಯರ್ಥಿ ಹೆಸರು ಘೋಷಿಸಿದ ಕುಮಾರಸ್ವಾಮಿ

ಹಾಸನ: ವಿಧಾನಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ಕುತೂಹಲಕ್ಕೆ ಕಾರಣವಾಗಿದ್ದು, ಈ ಬಾರಿ ಹಾಸನ ಜಿಲ್ಲೆಯ ಅರಸಿಕೆರೆ ಕ್ಷೇತ್ರದ ಹಾಲಿ ಅಭ್ಯರ್ಥಿ ಶಿವಲಿಂಗೇಗೌಡರನ್ನು ಕೈಬಿಟ್ಟು ಹೊಸ ಅಭ್ಯರ್ಥಿಗೆ ಜೆಡಿಎಸ್ ಟಿಕೆಟ್ ಘೋಷಣೆ ಮಾಡಲಾಗಿದೆ.

ಅರಸಿಕೆರೆಯಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಬಾಣಾವರ ಅಶೋಕ್ ಗೆ ಅರಸಿಕೆರೆ ಜೆಡಿಎಸ್ ಟಿಕೆಟ್ ನೀಡುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಹಾಲಿ ಶಾಸಕ ಶಿವಲಿಂಗೇಗೌಡರಿಗೆ ಸೆಡ್ಡು ಹೊಡೆದಿದ್ದಾರೆ.

ಸಮಾವೇಶದಲ್ಲಿ ಹಾಲಿ ಶಾಸಕ ಶಿವಲಿಂಗೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಪಕ್ಷವನ್ನು ಹಂತಹಂತವಾಗಿ ಮುಗಿಸಲು ಯತ್ನಿಸಿದ್ದರು. ಸಭೆಗೆ ಹೋಗದಂತೆ ಹಣ ಹಂಚಿಕೆ ಮಾಡಿದ್ದಾರೆ. ನಿನ್ನೆ ಕೂಡ ಶಿವಲಿಂಗೇಗೌಡರ ಜತೆ ಹೆಚ್.ಡಿ. ರೇವಣ್ಣ ಮಾತನಾಡಿ, ದುಡುಕಬೇಡಿ ಜೆಡಿಎಸ್ ನಲ್ಲಿಯೇ ಇರುವಂತೆ ಹೇಳಿದ್ದರು ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read