ಶ್ರೀನಗರ: ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನ ಮತ್ತೆ ಗುಂಡಿನ ದಾಳಿ ನಡೆಸಿದೆ. ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ 12ಕ್ಕೂ ಹೆಚ್ಚು ಬಾರಿ ಸ್ಪೋಟದ ಸದ್ದು ಕೇಳಿದ್ದು, ಜಮ್ಮುವಿನಲ್ಲಿ ಸಂಪೂರ್ಣ ಬ್ಲಾಕ್ ಔಟ್ ಮಾಡಲಾಗಿದೆ.
ಕಾಶ್ಮೀರ, ಗುಜರಾತ್, ರಾಜಸ್ಥಾನ, ಪಂಜಾಬ್ ನಲ್ಲಿ ಪಾಕಿಸ್ತಾನ ಡ್ರೋನ್ ದಾಳಿಗೆ ಯತ್ನಿಸಿದೆ.
ಭಾರತೀಯ ಸೇನಾ ನೆಲೆಗಳನ್ನೇ ಗುರಿಯಾಗಿಸಿಕೊಂಡು ಪಾಕಿಸ್ತಾನದಿಂದ ದಾಳಿ ನಡೆಸಲಾಗಿದ್ದು, ಶ್ರೀನಗರದತ್ತ ಪಾಕಿಸ್ತಾನದ 50 ಡ್ರೋನ್ ಗಳು ನುಗ್ಗಿ ಬಂದಿವೆ.
ಶ್ರೀನಗರದಲ್ಲಿ ದಾಳಿ, ಸ್ಪೋಟದ ಸದ್ದಿನ ಬಗ್ಗೆ ಸಿಎಂ ಒಮರ್ ಅಬ್ದುಲ್ಲಾ ಮಾಹಿತಿ ಹಂಚಿಕೊಂಡಿದ್ದು, ಇದು ಯಾವುದೇ ಕದನ ವಿರಾಮವಲ್ಲ. ಮತ್ತೆ ಸ್ಪೋಟ, ಗುಂಡಿನ ಸದ್ದು ಕೇಳಿಬರುತ್ತಿದೆ ಎಂದು ತಿಳಿಸಿದ್ದಾರೆ. ಶ್ರೀನಗರದ ಮಧ್ಯಭಾಗದಲ್ಲಿರುವ ವಾಯು ರಕ್ಷಣಾ ಘಟಕಗಳು ಇದೀಗಷ್ಟೇ ತೆರೆದಿವೆ. ಈ ನಡುವೆ ಕದನ ವಿರಾಮಕ್ಕೆ ಏನಾಯಿತು? ಶ್ರೀನಗರದಾದ್ಯಂತ ಸ್ಫೋಟಗಳು ಕೇಳಿಬಂದಿವೆ ಎಂದು ತಿಳಿಸಿದ್ದಾರೆ.
What the hell just happened to the ceasefire? Explosions heard across Srinagar!!!
— Omar Abdullah (@OmarAbdullah) May 10, 2025
#WATCH | A complete blackout has been enforced in Jammu
— ANI (@ANI) May 10, 2025
(Visuals deferred by an unspecified time) pic.twitter.com/kC9CzwlxSI