BREAKING: ಕರಗ ಮಹೋತ್ಸವದ ವೇಳೆ ಅಗ್ನಿ ಆಕಸ್ಮಿಕ; 10ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

ಬೆಂಗಳೂರು: ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ ವೇಳೆ ಅಗ್ನಿ ಅವಘಡ ಸಂಭವಿಸಿದೆ. ದೇವಸ್ಥಾನದ ಮುಂದೆ ನಿಲ್ಲಿಸಿದ್ದ ವಾಹನಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ದೇವಸ್ಥಾನದ ಮುಂದೆ ಹಚ್ಚಿದ ಕರ್ಪೂರದ ಬೆಂಕಿ ತಗುಲಿ ಸ್ಥಳದಲ್ಲಿದ್ದ ವಾಹನಗಳು ಸುಟ್ಟು ಭಸ್ಮವಾಗಿವೆ. ಮೈಕ್ ನಲ್ಲಿ ಅನೌನ್ಸ್ ಮಾಡಿದರೂ ವಾಹನಗಳನ್ನು ಭಕ್ತರು ತೆಗೆದಿಲ್ಲ. ಇದರಿಂದಾಗಿ ಬೆಂಕಿ ಕೆನ್ನಾಲಿಗೆ ವಾಹನಗಳಿಗೆ ವ್ಯಾಪಿಸಿದೆ.

ಘಟನೆಯಲ್ಲಿ ದೇವಸ್ಥಾನದ ಮುಂದೆ ನಿಲ್ಲಿಸಿದ್ದ 10ಕ್ಕೂ ಹೆಚ್ಚು ದ್ವಿಚಕ್ರವಾಹನಗಳು ಸುಟ್ಟು ಕರಕಲಾಗಿವೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read