BREAKING: ಕೇಂದ್ರ ಬಜೆಟ್-2023; ರಾಷ್ಟ್ರಪತಿ ಭೇಟಿಯಾಗಿ ಅಂಕಿತ ಪಡೆದ ವಿತ್ತ ಸಚಿವೆ

ನವದೆಹಲಿ: ಇಂದು ಲೋಕಸಭೆಯಲ್ಲಿ ಬಿಜೆಪಿ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಬಜೆಟ್ ಮಂಡನೆಗೆ ಸಮ್ಮತಿ ಪಡೆದರು.

ಬೆಳಿಗ್ಗೆ 11 ಗಂಟೆಗೆ 5ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಲಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಜೆಟ್ ಮಂಡನೆಗೆ ಪೂರ್ವಭಾವಿಯಾಗಿ ನಡೆಯುವ ಕೇಂದ್ರ ಸಚಿವ ಸಂಪುಟ ಸಭೆಗೂ ಮುನ್ನ ಶಿಷ್ಟಾಚಾರದಂತೆ ರಾಷ್ಟ್ರಪತಿ ಭವನಕ್ಕೆ ತೆರಳಿ, ರಾಷ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು.

ಬಳಿಕ ಬಜೆಟ್ ಮಂಡನೆಗೆ ರಾಷ್ಟ್ರಪತಿಗಳಿಂದ ಅಂಕಿತ ಪಡೆದುಕೊಂಡರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read