BREAKING: ಗ್ಯಾಸ್ ಗೀಸರ್ ಅವಘಡ; ವಿಷಾನೀಲ ಸೋರಿಕೆಯಾಗಿ ಇಬ್ಬರು ದುರ್ಮರಣ

ಬೆಂಗಳೂರು: ಗ್ಯಾಸ್ ಗೀಸರ್ ನಿಂದ ವಿಷಾನೀಲ ಸೋರಿಕೆಯಾಗಿ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಚಿಕ್ಕಜಾಲದಲ್ಲಿ ನಡೆದಿದೆ.

ಚಿಕ್ಕಜಾಲದ ತರಬನಹಳ್ಳಿಯಲ್ಲಿ ಈ ದುರಂತ ಸಂಭವಿಸಿದ್ದು, ಗುಂಡ್ಲುಪೇಟೆಯ ಚಂದ್ರಶೇಖರ್, ಗೋಕಾಕ್ ನ ಸುಧಾರಾಣಿ ಮೃತರು. ಸ್ನಾನ ಮಾಡುತ್ತಿರುವಾಗ ವಿಷಾನಿಲದಿಂದ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿರುವ ಜೋಡಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗಾಲ್ಫ್ ಹೋಟೆಲ್ ನಲ್ಲಿ ಚಂದ್ರಶೇಖರ್ ಹಾಗೂ ಸುಧಾರಾಣಿ ಕೆಲಸ ಮಾಡುತ್ತಿದ್ದರು. ಶೀಘ್ರದಲ್ಲೇ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಅಷ್ಟರಲ್ಲಿ ದುರಂತ ಸಂಭವಿಸಿದೆ. ಜೂನ್ 10ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮನೆ ಮಾಲೀಕರು ಮನೆಯೊಳಳಗೆ ನೋಡಿದಾಗ ದುರಂತ ಗೊತ್ತಾಗಿದೆ. ಚಿಕ್ಕಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read