BREAKING : ‘ಧರ್ಮಸ್ಥಳ ಕೇಸ್’ ಗೆ ಸ್ಪೋಟಕ ಟ್ವಿಸ್ಟ್ : ದೂರುದಾರನ ಪರ ‘ಸಾಕ್ಷಿ’ ಹೇಳಲು ಮುಂದಾದ  6 ಮಂದಿ ಸ್ಥಳೀಯರು.!

ಧರ್ಮಸ್ಥಳ : ಧರ್ಮಸ್ಥಳದಲ್ಲಿ ಅಸ್ಥಿಪಂಜರ ಪತ್ತೆ ಕೇಸ್ ಗೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದ್ದು, ದೂರುದಾರನ ಪರ ಹೇಳಿಕೆ ನೀಡಲು 6 ಸ್ಥಳೀಯರು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ಹೌದು, ಧರ್ಮಸ್ಥಳದಲ್ಲಿ ನೂರಾರು ಶವ ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ತನಿಖೆ ನಡೆಸುತ್ತಿದ್ದು, ಅನಾಮಿಕ ವ್ಯಕ್ತಿಗೆ ಸಾಥ್ ನೀಡಲು ದೂರುದಾರನ ಪರ ಹೇಳಿಕೆ ನೀಡಲು 6 ಸ್ಥಳೀಯರು ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಎಸ್ ಐ ಟಿ ಅಧಿಕಾರಿಗಳು ಪ್ರತಿಕ್ರಿಯೆ ನೀಡುವವರೆಗೂ ಇದು ಅಧಿಕೃತ ಮಾಹಿತಿ ಎಂದು ಹೇಳುವುದಕ್ಕೆ ಆಗಲ್ಲ.

ಪ್ರಕರಣದ ಮತ್ತೋರ್ವ ಪ್ರಮುಖ ಬೆಳವಣಿಗೆ ಅಂದರೆ ಧರ್ಮಸ್ಥಳದಲ್ಲಿ 15 ವರ್ಷಗಳ ಹಿಂದೆ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣವನ್ನು ಎಸ್ ಐ ಟಿಗೆ ಹಸ್ತಾಂತರ ಮಾಡಲಾಗಿದೆ.ದೂರುದಾರ ಟಿ. ಜಯಂತ್ ಎನ್ನುವ ಹೊಸ ಸಾಕ್ಷಿದಾರ ಬಾಲಕಿಯ ಶವವನ್ನು ಹೂತಿರುವುದನ್ನು ಕಣ್ಣಾರೆ ನೋಡಿದ್ದೇನೆ ಎಂದು ಸಾಕ್ಷಿ ಹೇಳಿದ್ದರು. ಅಲ್ಲದೇ ದೂರು ದಾಖಲಿಸಿದ್ದರು. ಈ ಪ್ರಕರಣದ ತನಿಖೆಯನ್ನು ಎಸ್ ಐ ಟಿಗೆ ಹಸ್ತಾಂತರಿಸಲಾಗಿದೆ.ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನುವ ದೂರಿಗೆ ಸಂಬಂಧಿಸಿದಂತೆ ಮತ್ತೊಬ್ಬ ವ್ಯಕ್ತಿಯ ಎಸ್ಐಟಿ ಎದುರು ಆಗಮಿಸಿ ದೂರು ನೀಡಿದ್ದರು. ಜಯಂತ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read