BREAKING: ನಾವು ಪ್ಲ್ಯಾನ್ ಮಾಡುವ ಮೊದಲೇ ಭಾರತ ಬ್ರಹ್ಮೋಸ್ ಕ್ಷಿಪಣಿ ದಾಳಿ ನಡೆಸಿತ್ತು: ‘ಆಪರೇಷನ್ ಸಿಂಧೂರ್’ನಿಂದಾದ ಹಾನಿ ಬಗ್ಗೆ ಒಪ್ಪಿಕೊಂಡ ಪಾಕ್ ಪ್ರಧಾನಿ

ಅಜೆರ್ಬೈಜಾನ್‌: ‘ಪಾಕಿಸ್ತಾನದ ಯೋಜಿತ ಪ್ರತಿಕ್ರಿಯೆಗೂ ಮುನ್ನ ಭಾರತ ಬ್ರಹ್ಮೋಸ್ ವಾಯುನೆಲೆಗಳ ಮೇಲೆ ದಾಳಿ ಮಾಡಿದೆ’ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಒಪ್ಪಿಕೊಂಡಿದ್ದಾರೆ.

ತಮ್ಮ ಸಶಸ್ತ್ರ ಪಡೆಗಳು ಯೋಜಿತ ಪ್ರತೀಕಾರದ ಕಾರ್ಯಾಚರಣೆಯನ್ನು ಪ್ರಾರಂಭಿಸುವ ಮೊದಲೇ ಭಾರತೀಯ ಸೇನೆಯು ಪಾಕಿಸ್ತಾನದೊಳಗಿನ ಪ್ರಮುಖ ಗುರಿಗಳನ್ನು ಹೊಡೆದಿದೆ ಎಂದು ಒಪ್ಪಿಕೊಂಡಿದ್ದಾರೆ.

ಗುರುವಾರ ಅಜೆರ್ಬೈಜಾನ್‌ನಲ್ಲಿ ಮಾತನಾಡಿದ ಷರೀಫ್, ಮೇ 10 ರ ಮುಂಜಾನೆ – ಬೆಳಗಿನ ಪ್ರಾರ್ಥನೆಯ ನಂತರ ಪಾಕಿಸ್ತಾನಿ ಮಿಲಿಟರಿ ಪ್ರತಿಕ್ರಿಯೆಗೆ ನಿಗದಿಪಡಿಸಲಾದ ಗಂಟೆಗಳ ಮೊದಲು ರಾವಲ್ಪಿಂಡಿ ವಿಮಾನ ನಿಲ್ದಾಣ ಸೇರಿದಂತೆ ಹಲವಾರು ಪ್ರಾಂತ್ಯಗಳನ್ನು ಗುರಿಯಾಗಿಸಿಕೊಂಡು ಭಾರತ ಬ್ರಹ್ಮೋಸ್ ಕ್ಷಿಪಣಿ ದಾಳಿಯನ್ನು ನಡೆಸಿತು ಎಂದು ಬಹಿರಂಗಪಡಿಸಿದ್ದಾರೆ.

ಮೇ 9-10 ರ ರಾತ್ರಿ, ನಾವು ಭಾರತೀಯ ಆಕ್ರಮಣಕ್ಕೆ ಪ್ರತಿಕ್ರಿಯಿಸಲು ನಿರ್ಧರಿಸಿದೆವು. ಫಜ್ರ್ ಪ್ರಾರ್ಥನೆಯ ನಂತರ ನಮ್ಮ ಸಶಸ್ತ್ರ ಪಡೆಗಳು ಬೆಳಿಗ್ಗೆ 4.30 ಕ್ಕೆ ಕಾರ್ಯನಿರ್ವಹಿಸಲು ಸಿದ್ಧವಾಗಿದ್ದವು. ಆದರೆ ಆ ಗಂಟೆ ಬರುವ ಮೊದಲೇ, ಭಾರತ ಮತ್ತೊಮ್ಮೆ ಬ್ರಹ್ಮೋಸ್ ಬಳಸಿ ಕ್ಷಿಪಣಿ ದಾಳಿ ನಡೆಸಿತು, ರಾವಲ್ಪಿಂಡಿಯ ವಿಮಾನ ನಿಲ್ದಾಣ ಸೇರಿದಂತೆ ಪಾಕಿಸ್ತಾನದ ವಿವಿಧ ಪ್ರಾಂತ್ಯಗಳನ್ನು ಗುರಿಯಾಗಿಸಿಕೊಂಡಿತು ಎಂದು ಅಜೆರ್ಬೈಜಾನ್‌ನ ಲಾಚಿನ್‌ನಲ್ಲಿ ಮಾಡಿದ ಭಾಷಣದಲ್ಲಿ ಷರೀಫ್ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read