ಬೆಂಗಳೂರು : ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಿಂದ KSCA ಪದಾಧಿಕಾರಿಗಳು ಹೈಕೋರ್ಟ್ ಮೊರೆಹೋಗಿದ್ದು, ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಕೆ ಎಸ್ ಸಿಎ ಆಡಳಿತ ಮಂಡಳಿ ಅಧ್ಯಕ್ಷ ರಘುರಾಮ್ ಭಟ್ , ಕಾರ್ಯದರ್ಶಿ ಎಂ ಶಂಕರ್., ಖಜಾಂಚಿ ಇಎಸ್ ಜೈರಾಮ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಎಫ್ ಐ ರದ್ದು ಕೋರಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರು: ಕಾಲ್ತುಳಿತ ದುರಂತದಲ್ಲಿ ಆರ್ ಸಿಬಿಯ 11 ಅಭಿಮಾನಿಗಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಕೆ ಎಸ್ ಸಿಎ ಕಾರ್ಯದರ್ಶಿ, ಖಜಾಂಚಿ, ಇವೆಂಟ್ ಮ್ಯಾನೇಜ್ಮೆಂಟ್ ಮುಖ್ಯಸ್ಥರ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಕೆ ಎಸ್ ಸಿಎ ಕಾರ್ಯದರ್ಶಿ ಶಂಕರ್ ಮನೆ ಮೇಲೆ ಪೊಲೀಸರು ದಾಳಿ ನಡೆಸುತ್ತಿದ್ದಂತೆ ಶಂಕರ್ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಖಜಾಂಚಿ ಜಯರಾಮ್ ಮನೆ ಮೇಲೂ ಪೊಲೀಸರು ತಡ ರಾತ್ರಿ ದಾಳಿ ನಡೆಸಿದ್ದು, ಈ ವೇಳೆ ಜಯರಾಮ್ ಕೂಡ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.ಡಿಎನ್ ಎ ಮುಖ್ಯಸ್ಥ ವೆಂಕಟ್ ವರ್ಧನ್ ಕೂಡ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ಡಿಎನ್ ಎ ಹಣಕಾಸು ಮುಖ್ಯಸ್ಥ ಮಜೀದ್ ಮನೆ ಮೇಲೂ ಪೊಲೀಸರು ದಾಳಿ ನಡೆಸಿದ್ದು, ಅವರು ಕೂಡ ಎಸ್ಕೇಪ್ ಆಗಿದ್ದಾರೆ. ಮತ್ತೊಂದೆಡೆ ಆರ್ ಸಿಬಿ ಮುಖ್ಯಸ್ಥ ರಾಜೇಶ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ರಾಜೇಶ್ ಕೂಡ ಮನೆಯಲ್ಲಿ ಇಲ್ಲ, ಅವರೂ ಕೂಡ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.