BREAKING: ಬೆಳ್ಳಂಬೆಳಗ್ಗೆ ರಾಯಚೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

ರಾಯಚೂರು: ರಾಯಚೂರಿನಲ್ಲಿ ಬೆಳ್ಳಂಬೆಳಗ್ಗೆ ಚಾಕುವಿನಿಂದ ಇರಿದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ರಾಯಚೂರು ನಗರದ ಸಾದಿಕ್(27) ಕೊಲೆಯಾದ ಯುವಕ. ರಸ್ತೆ ಬದಿ ಇಡ್ಲಿ ಅಂಗಡಿ ಇಡುವ ವಿಚಾರಕ್ಕೆ ಗಲಾಟೆಯಾಗಿ ಕರೀಂ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ರಾಯಚೂರು ನಗರದ ಜಾಕೀರ್ ಹುಸೇನ್ ಸರ್ಕಲ್ ಬಳಿ ಘಟನೆ ನಡೆದಿದೆ. ನಡುರಸ್ತೆಯಲ್ಲಿಯೇ ಸಾಧಿಕ್ ಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಕರೀಮ್ ನನ್ನು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read