BREAKING: ಭೀಕರ ಅಗ್ನಿ ದುರಂತ; ನಾಲ್ವರು ಯೋಧರು ಹುತಾತ್ಮ

ಶ್ರೀನಗರ: ಸೇನಾ ವಾಹನದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ನಾಲ್ವರು ಯೋಧರು ಹುತಾತ್ಮರಾಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.

ಜಮ್ಮು-ಕಾಶ್ಮೀರದ ಪೂಂಚ್ ವಲಯದಲ್ಲಿ ಈ ದುರಂತ ಸಂಭವಿಸಿದೆ. ಅರಣ್ಯ ಪ್ರದೇಶದಲ್ಲಿ ಸೇನಾ ವಾಹನ ತೆರಳುತ್ತಿದ್ದ ವೇಳೆ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ಅಗ್ನಿ ಆಕಸ್ಮಿಕದಿಂದಾಗಿ ಸೇನಾ ವಾಹನ ಹೊತ್ತಿ ಉರಿದಿದ್ದು, ಸೇನಾ ವಾಹನದಲ್ಲಿ ತೆರಳುತ್ತಿದ್ದ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read