ಮಂಡ್ಯ : ಮದ್ದೂರಿನಲ್ಲಿ ಕಲ್ಲು ತೂರಾಟ, ಗಲಭೆ ಕೇಸ್’ ಗೆ ಸಂಬಂಧಿಸಿದಂತೆ 500 ಮಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಮಂಡ್ಯದ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆಸಿದ ಹಲವರು ಹಾಗೂ ಪ್ರತಿಭಟನೆ ನಡೆಸಿದರ ವಿರುದ್ಧ ಪ್ರಕರಣ ದಾಖಲಾಗಿದೆ.
ಮದ್ದೂರಿನಲ್ಲಿ ನಿನ್ನೆ ನಡೆಯುತ್ತಿದ್ದ ಪ್ರತಿಭಟನೆ ಭುಗಿಲೆದ್ದಿದ್ದು, ಘಟನೆ ಖಂಡಿಸಿ ಪ್ರತಿಭಟನಾಕಾರರು ಕಲ್ಲನ್ನು ತೂರಿದ್ದಾರೆ. ಈ ವೇಳೆ ಪೊಲೀಸರು ಲಾಠಿ ಬೀಸಿದ್ದಾರೆ. ರಾಮರಹಿಮ್ ನಗರದಲ್ಲಿ ಮೆರವಣಿಗೆಯ ವೇಳೆ ಕಲ್ಲು ತೂರಾಟ ನಡೆದಿದೆ. ಲೈಟ್ ಆಫ್ ಮಾಡಿ ಕಲ್ಲು ತೂರಾಟ ಮಾಡಿದ್ದಾರೆ ಎನ್ನುವ ಆರೋಪವಿದೆ.