BREAKING : ಮಧುಗಿರಿಯಲ್ಲಿ ದೇವರ ಪ್ರಸಾದ ಸೇವಿಸಿ ಮೂವರು ಸಾವು, 11 ಕ್ಕೂ ಹೆಚ್ಚು ಮಂದಿ ಅಸ್ವಸ್ಥ.!

ಮಧುಗಿರಿ : ಕಲುಷಿತ ಆಹಾರ ಸೇವಿಸಿ   ವಾಂತಿಭೇದಿಯಿಂದ ಮೂವರು ಮೃತಪಟ್ಟು, 11 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ಮಧುಗಿರಿ ತಾಲೂಕಿನ ಬುಳಸಂದ್ರ  ಗ್ರಾಮದಲ್ಲಿ ನಡೆದಿದೆ.

ಬುಳ್ಳಸಂದ್ರ ಗ್ರಾಮದ ತಿಮ್ಮಕ್ಕ (85), ಗಿರಿಯಮ್ಮ (90) ಹಾಗೂ ಮಡಕಶಿರಾ ತಾಲ್ಲೂಕಿನ ಸಿದ್ದಗಿರಿ ಗ್ರಾಮದ ಕಾಟಮ್ಮ (45) ಮೃತರು. 11 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಾಲ್ಲೂಕಿನ ಬುಳ್ಳಸಂದ್ರ ಗ್ರಾಮದಲ್ಲಿ ಮುತ್ತುರಾಯ ಸ್ವಾಮಿ ಜಾತ್ರೆಗಾಗಿ ಮನೆಯಲ್ಲಿ ಅಡುಗೆ ಮಾಡಿದ್ದರು. ಆಹಾರ ಸೇವೆಯಿಂದಾಗಿ ವಾಂತಿ, ಭೇದಿ ಕಾಣಿಸಿಕೊಂಡಿದೆ. ತೀವ್ರವಾಗಿ ಅಸ್ವಸ್ಥರಾಗಿದ್ದ ಮೂವರು ಮೃಪಟ್ಟಿದ್ದಾರೆ.
ಬುಳ್ಳಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಕ್ಲಿನಿಕ್ ತೆರೆದು ಚಿಕಿತ್ಸೆ ನೀಡಲಾಗುತ್ತಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read