BREAKING : ಶರಣಾದ 6 ಮಂದಿ ನಕ್ಸಲರನ್ನು ಬೆಂಗಳೂರಿನ ‘NIA’ ಕೋರ್ಟ್’ಗೆ ಹಾಜರುಪಡಿಸಿದ ಪೊಲೀಸರು.!

ಬೆಂಗಳೂರು : ಶರಣಾಗತರಾದ 6 ಮಂದಿ ನಕ್ಸಲರನ್ನು ಚಿಕ್ಕಮಗಳೂರಿನ ಪೊಲೀಸರು
ಬೆಂಗಳೂರಿನ ಎನ್ ಐಎ (NIA) ಕೋರ್ಟ್ ಗೆ ಹಾಜರುಪಡಿಸಿದ್ದಾರೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ 6 ಮಂದಿ ನಕ್ಸಲರನ್ನು ಚಿಕ್ಕಮಗಳೂರಿನ ಪೊಲೀಸರು ಬೆಂಗಳೂರಿನ ಎನ್ ಐಎ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ನಂತರ ಕೋರ್ಟ್ ನಕ್ಸಲರ ಪ್ರಕರಣ ಸಂಬಂಧ ವಿಚಾರಣೆ ನಡೆಯಲಿದೆ.

ಕರ್ನಾಟಕದ ಇತಿಹಾಸದಲ್ಲಿಯೇ ಅತಿದೊಡ್ಡ ಮಟ್ಟದಲ್ಲಿ ನಕ್ಸಲರು ಶರಣಾಗತರಾಗಿದ್ದು, 24 ವರ್ಷಗಳ ಬಳಿಕ ಮೋಸ್ಟ್ ವಾಂಟೆಡ್ 6 ನಕ್ಸಲರು ನಿನ್ನೆ ಸರ್ಕಾರದ ಮುಂದೆ ಶರಣಾಗತರಾಗಿದ್ದಾರೆ. ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಮ್ಮುಖದಲ್ಲಿ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ 6 ನಕ್ಸಲರು ಶರಣಾಗತರಾಗಿದ್ದಾರೆ.

ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ತಮಿಳುನಾಡಿನ ಕೆ ವಸಂತ ಅಲಿಯಾಸ್ ರಮೇಶ್, ಕೇರಳದ ಜೀಶ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಶರಣಾಗತರಾದ ನಕ್ಸಲರು.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read