BREAKING : ಹೊಸಪೇಟೆಯಲ್ಲಿ ‘ಗ್ಯಾಸ್ ಸಿಲಿಂಡರ್’ ಸ್ಪೋಟಗೊಂಡು 8 ಮಂದಿಗೆ ಗಂಭೀರ ಗಾಯ : ಮನೆ ಛಿದ್ರ ಛಿದ್ರ.!

ವಿಜಯನಗರ : ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಮನೆ ಛಿದ್ರ ಛಿದ್ರವಾದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ನಡೆದಿದೆ.

ಮನೆಯಲ್ಲಿ ಮನೆಯ ಸದಸ್ಯರು ಮಲಗಿದ್ದಾಗ ಸಿಲಿಂಡರ್ ಸ್ಪೋಟಗೊಂಡಿದೆ.ಹಾಲಪ್ಪ, ಸೋದರ ಮೈಲಾರಪ್ಪ ಸೇರಿ 8 ಮಂದಿಗೆ ಗಾಯಗಳಾಗಿದೆ. ಗಾಯಾಳುಗಳಿಗೆ ತೋರಣಗಲ್ಲು ಸಂಜೀವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read