BREAKING : ಬೆಂಗಳೂರಲ್ಲಿ ಮಹಿಳೆಯನ್ನು ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಥಳಿಸಿದ ಯುವಕರು.!

ಬೆಂಗಳೂರು : ಬೆಂಗಳೂರಿನಲ್ಲಿ ಹಾಲು ತರಲು ಹೊರಗೆ ಹೋಗಿದ್ದ ಮಹಿಳೆಯನ್ನು ವ್ಯಕ್ತಿಯೋರ್ವ ಎಳೆದೊಯ್ಯಲು ಯತ್ನಿಸಿದ್ದು, ಬಳಿಕ ಸಾರ್ವಜನಿಕರು ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ನಿನ್ನೆ ರಾತ್ರಿ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಕಲ್ಕೆರೆ ಕಾಲೊನಿ ಬಳಿ ಈ ಘಟನೆ ನಡೆದಿದೆ.
ಹಾಲು ತರಲು ಮನೆಯಿಂದ ಹೊರಕ್ಕೆ ಬಂದ ಮಹಿಳೆಯನ್ನು ಮದ್ಯದ ನಶೆಯಲ್ಲಿದ್ದ ವ್ಯಕ್ತಿ ಆಕೆಯ ಬಾಯಿಮುಚ್ಚಿ ಎಳೆದೊಯ್ಯಲು ಯತ್ನಿಸಿದ್ದಾನೆ .

ಕೂಡಲೇ ಆಕೆ ಸಹಾಯಕ್ಕಾಗಿ ಕಿರುಚಿಕೊಂಡಿದ್ದು, ಮಹಿಳೆಯ ಕಿರುಚಾಟ ಕೇಳಿ ಸ್ಥಳಕ್ಕೆ ಬಂದ ಗ್ರಾಮದ 10 ಜನರ ಗುಂಪು ವ್ಯಕ್ತಿಯ ಬಟ್ಟೆ ಬಿಚ್ಚಿ ಹಿಗ್ಗಾಮುಗ್ಗಾ ಥಳಿಸಿದೆ. ಪರಿಣಾಮ ಆತ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read