BREAKING : ದಾವಣಗೆರೆಯಲ್ಲಿ ಘೋರ ದುರಂತ : ಅಡಿಕೆ ತೋಟದಲ್ಲಿ ವಿದ್ಯುತ್ ತಂತಿ ತಗುಲಿ ದಂಪತಿ ದುರ್ಮರಣ..!

ದಾವಣಗೆರೆ : ಅಡಿಕೆ ತೋಟದಲ್ಲಿ ವಿದ್ಯುತ್ ತಂತಿ ತಗುಲಿ ದಂಪತಿ ದುರ್ಮರಣಕ್ಕೀಡಾದ ಘಟನೆ ದಾವಣಗೆರೆ ತಾಲೂಕಿನ ಕಾಟೀಹಳ್ಳ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ನಾಗರಾಜ್ ಹಾಗೂ ಲತಾ ಎಂದು ಗುರುತಿಸಲಾಗಿದೆ. ಅಡಿಕೆ ತೋಟದಲ್ಲಿ ಟಿಸಿ ಸಂಪರ್ಕದ ತಂತಿ ತುಳಿದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಟಿಸಿ ಸಂಪರ್ಕಿಸುವ ತಂತಿ ತುಂಡಾಗಿ ತೋಟದಲ್ಲಿ ಬಿದ್ದಿತ್ತು ಎನ್ನಲಾಗಿದೆ. ಒಬ್ಬರನ್ನು ಕಾಪಾಡಲು ಹೋಗಿ ಇನ್ನೊಬ್ಬರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read