BREAKING : ತಮಿಳುನಾಡಿನಲ್ಲಿ ಘೋರ ದುರಂತ : ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ 7 ಮಂದಿ ಬಲಿ.!

ತಮಿಳುನಾಡು : ತಮಿಳುನಾಡಿನಲ್ಲಿ  ಮನೆ ಮೇಲೆ  ಗುಡ್ಡ ಕುಸಿದು ಘೋರ ದುರಂತ ಸಂಭವಿಸಿದ್ದು, ಮಕ್ಕಳು ಸೇರಿದಂತೆ ಒಂದೇ ಕುಟುಂಬದ7 ಮಂದಿ ಬಲಿಯಾಗಿದ್ದಾರೆ.

ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಘಟನೆ ನಡೆದಿದೆ. ಭಾನುವಾರ ‘ಫೆಂಗಲ್’ ಚಂಡಮಾರುತದ ಸಮಯದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಜೆಸಿಬಿ ಬಳಸಿ ಮಣ್ಣು ತೆರವುಗೊಳಿಸಲಾಗುತ್ತಿದ್ದು, ಸದ್ಯ ನಾಲ್ವರ ಮೃತದೇಹ ಸಿಕ್ಕಿದೆ. ಇನ್ನುಳಿದ ಮೂವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಪರಿಸ್ಥಿತಿಗೆ ಸ್ಪಂದಿಸಿ, ಅಣ್ಣಾಮಲೈಯರ್ ಬೆಟ್ಟದ ಕೆಳ ಇಳಿಜಾರುಗಳ ಬಳಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ಎಫ್) ಮತ್ತು ಸ್ಥಳೀಯ ತಂಡಗಳು ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read