BREAKING: ಗಣೇಶ ಮೆರವಣಿಗೆಯಲ್ಲಿ ಹಸಿರು ಬಾವುಟ ತಂದಿದ್ದನ್ನು ವಿರೋಧಿಸಿದ ಯುವಕನಿಗೆ ಚಾಕು ಇರಿತ

ಬಾಗಲಕೋಟೆ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಮುಸ್ಲಿಂ ಯುವಕ ಹಸಿರು ಧ್ವಜ ತಂದಿದ್ದನ್ನು ವಿರೋಧಿಸಿದ ಹಿಂದೂ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ.

ಗಣೇಶ ಮೆರವಣಿಗೆಯಲ್ಲಿ ಹಸಿರು ಧ್ವಜ ಹಾರಿಸಬೇಡ ಎಂದು ಹೇಳಿದ ಹಿಂದೂ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ಬಾಗಲಕೋಟೆ ತಾಲೂಕಿನ ಹೊಸ ಮುರನಾಳ ಗ್ರಾಮದಲ್ಲಿ ಘಟನೆ ನಡೆದಿದೆ. ನವೀನ್ ಕೂಡ್ಲೆಪ್ಪನವರ(22)ಗೆ ಆಸಿಫ್ ಬೆಳಗಾಂವಕರ ಚಾಕುವಿನಿಂದ ಇರಿದಿದ್ದಾನೆ. ನವೀನ್ ಮುಖ ಹಾಗೂ ಬೆನ್ನಿಗೆ ಗಾಯಗಳಾಗಿದ್ದು, ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಾದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read