ರಾಯಚೂರು: ಲಾರಿ, ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ಮಸ್ಕಿ ಹೊರವಲಯದಲ್ಲಿ ನಡೆದಿದೆ.
ಬೈಕ್ ನಲ್ಲಿ ತೆರಳುತ್ತಿದ್ದ ಮಂಜುನಾಥ್ ಮತ್ತು ನಾಗಪ್ಪ ಮೃತಪಟ್ಟವರು ಎಂದು ಹೇಳಲಾಗಿದೆ. ಮಸ್ಕಿಯಿಂದ ಕುಡುಗಲದಿನ್ನಿಗೆ ತೆರಳುವಾಗ ಅಪಘಾತ ಸಂಭವಿಸಿದೆ. ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.