BREAKING : ನಟ ದರ್ಶನ್ & ಗ್ಯಾಂಗ್’ ಗೆ ಮತ್ತೆ ಜೈಲೇ ಗತಿ : 1 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ.!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ1  ದಿನ ವಿಸ್ತರಣೆಯಾಗಿದೆ.

ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಅಂತ್ಯವಾದ ಹಿನ್ನೆಲೆ ಎಲ್ಲಾ 17 ಆರೋಪಿಗಳನ್ನು ಅವರು ಇರುವ ಜೈಲುಗಳಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಆದೇಶ ಹೊರಡಿಸಿದೆ.
ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ನಲ್ಲಿ ದರ್ಶನ್ ಗೆ ವಿಶೇಷ ಆತಿಥ್ಯ ನೀಡಿದ ವಿಚಾರ ಬಹಿರಂಗಗೊಂಡ ಬೆನ್ನಲ್ಲೇ ಪೊಲೀಸರು ಕೋರ್ಟ್ ಅನುಮತಿ ಪಡೆದು ಆರೋಪಿಗಳನ್ನು ರಾಜ್ಯದ ವಿವಿಧ ಜೈಲುಗಳಿಗೆ ಸ್ಥಳಾಂತರ ಮಾಡಿದ್ದರು.

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಭಾಗಿಯಾಗಿರುವುದು ಧೃಡವಾಗಿದ್ದು, ಚಾರ್ಜ್ ಶೀಟ್ ನಲ್ಲಿ ಸ್ಪೋಟಕ ಮಾಹಿತಿ ಬಯಲಾಗಿದೆ. ಒಟ್ಟಿನಲ್ಲಿ  ಇಂದು ಮತ್ತೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗುವ ಮೂಲಕ ದಾಸನಿಗೆ ಸೆರೆಮನೆ ವಾಸವೇ ಗತಿಯಾಗಿದೆ.

 

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read