BREAKING : ಮೈಸೂರಿನ ಕಾಮಾಕ್ಷಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಸಲಹೆ ಪಡೆದ ನಟ ದರ್ಶನ್ |Actor Darshan

ಮೈಸೂರು : ಮೈಸೂರಿನ ಕಾಮಾಕ್ಷಿ ಆಸ್ಪತ್ರೆಗೆ ನಟ ದರ್ಶನ್ ಭೇಟಿ ನೀಡಿದ್ದು, ವೈದ್ಯರ ಸಲಹೆ ಪಡೆದು ವಾಪಸ್ ಬಂದಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದ್ದಾರೆ.

ಬೆನ್ನುನೋವಿಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಡಿಸ್ಚಾರ್ಜ್ ಆಗಿದ್ದರು. ನಂತರ ಕೋರ್ಟ್ ಮೈಸೂರಿಗೆ ತೆರಳಲು ಅನುಮತಿ ನೀಡಿದ ಬಳಿಕ ಮೈಸೂರಿನ ಕಾಮಾಕ್ಷಿ ಆಸ್ಪತ್ರೆಗೆ ನಟ ದರ್ಶನ್ ಭೇಟಿ ನೀಡಿದ್ದು, ವೈದ್ಯರ ಸಲಹೆ ಪಡೆದು ಫಾರ್ಮ್ ಹೌಸ್ ಗೆ ಮರಳಿದ್ದಾರೆ.

ಬೆಂಗಳೂರಿನ ಸತ್ರ ನ್ಯಾಯಾಲಯವು ನಟ ದರ್ಶನ್ ಗೆ ಡಿ.20 ರಿಂದ ಜ.5 ರವರೆಗೆ ಮೈಸೂರಿಗೆ ತೆರಳಲು ಅನುಮತಿ ನೀಡಿತ್ತು. ಅನಾರೋಗ್ಯ ಪೀಡಿತರಾಗಿರುವ ತನ್ನ ತಾಯಿ ಜೊತೆ ಕಾಲ ಕಳೆಯಲು ಹಾಗೂ ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲು ಮೈಸೂರಿಗೆ ತೆರಳಲು ಅನುಮತಿ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಪುರಸ್ಕರಿಸಿ ಸಿಟಿ ಸಿವಿಲ್ ಕೋರ್ಟ್ ನ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ನಟ ದರ್ಶನ್ ಹಾಗೂ ಗ್ಯಾಂಗ್ ಗೆ 6 ತಿಂಗಳ ಬಳಿಕ ಹೈಕೋರ್ಟ್ ನಲ್ಲಿ ಜಾಮೀನು ಮಂಜೂರಾಗಿದ್ದು, ಆರೋಪಿಗಳು ಸದ್ಯ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read