BREAKING : ಬೆಂಗಳೂರಿನಲ್ಲಿ ಮತ್ತೊಂದು `ಡಬಲ್ ಮರ್ಡರ್’ : ಮಗನಿಂದಲೇ ತಂದೆ, ತಾಯಿಯ ಬರ್ಬರ ಹತ್ಯೆ!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಡಬಲ್ ಮರ್ಡರ್ ಪ್ರಕರಣ ಬೆಳಕಿಗೆ ಬಂದಿದ್ದು,, ಕುಡಿದ ಮತ್ತಿನಲ್ಲಿ ಸ್ವಂತ ಮಗನೇ ತಂದೆ, ತಾಯಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸವಾಗಿದ್ದ ಮಂಗಳೂರು ಮೂಲದ ವೃದ್ದ ದಂಪತಿಯನ್ನು ಸ್ವಂತ ಮಗನೇ ಹತ್ಯೆ ಮಾಡಿದ್ದಾನೆ.  ಮಗ ಶರತ್ ಎಂಬಾತ್ ತನ್ನ ತಂದೆ ಭಾಸ್ಕರ್ ಹಾಗೂ ತಾಯಿ ಶಾಂತಾಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಈ ಹಿಂದೆಯೂ ಶರತ್ ತನ್ನ ತಂದೆ, ತಾಯಿಯ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದ. ಘಟನಾ ಸ್ಥಳಕ್ಕೆ ಕೊಡಿಗೆಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read