ಬೆಂಗಳೂರು : ಗೋಲ್ಡ್ ಸ್ಲಗ್ಲಿಂಗ್ ಪ್ರಕರಣದಲ್ಲಿ ಲಾಕ್ ಆಗಿರುವ ನಟಿ ರನ್ಯಾರಾವ್ ಗೆ ಮತ್ತೊಂದು ಶಾಕ್ ಎದುರಾಗಿದೆ. ನಟಿ ರನ್ಯಾರಾವ್ ವಿಚಾರಣೆ ನಡೆಸಲು ಐಟಿ ಇಲಾಖೆಗೆ ಕೋರ್ಟ್ ಅನುಮತಿ ನೀಡಿದೆ.
ಹೌದು, ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ತನಿಖೆ ನಡೆಸಲು ಐಟಿ ಇಲಾಖೆಗೆ ಕೋರ್ಟ್ ಅನುಮತಿ ನೀಡಿದೆ. ಪರಪ್ಪನ ಅಗ್ರಹಾರದಲ್ಲಿ ಐಟಿ ಅಧಿಕಾರಿಗಳು ರನ್ಯಾರಾವ್ ವಿಚಾರಣೆ ನಡೆಸಲಿದ್ದಾರೆ.
ಗೋಲ್ಡ್ ಸ್ಲಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾರಾವ್ ಅರೆಸ್ಟ್ ಆಗಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿತ್ತು..ರನ್ಯಾ ರಾವ್ ಬಳಿ ಒಟ್ಟು 14.8 ಕೆಜಿ ಚಿನ್ನ ಸಿಕ್ಕಿರುವ ಮಾಹಿತಿ ಇದ್ದು ರಾಜ್ಯದ ಇತಿಹಾಸದಲ್ಲಿ ಅತಿ ದೊಡ್ಡ ಚಿನ್ನದ ಅಕ್ರಮ ಸಾಗಣೆ ಪ್ರಕರಣ ಎನ್ನಲಾಗಿದೆ. ರನ್ಯಾ ರಾವ್ ಡಿಜಿಪಿ ಡಾ. ಕೆ. ರಾಮಚಂದ್ರರಾವ್ ಅವರ ಮಲಮಗಳಾಗಿದ್ದಾರೆ.ಪ್ರಕರಣದಲ್ಲಿ ಜಾಮೀನು ಕೋರಿ ರನ್ಯಾರಾವ್ ಅರ್ಜಿ ಕೂಡ ಸಲ್ಲಿಸಿದ್ದರು, ಜಾಮೀನಿ ಸಿಗದೇ ಅವರಿಗೆ ಸದ್ಯಕ್ಕೆ ಜೈಲೇ ಗತಿ ಆಗಿದೆ.