ಬೆಂಗಳೂರಿಗರಿಗೆ ಮತ್ತೊಂದು ಶಾಕ್ : ಶೀಘ್ರವೇ ‘ಕಾವೇರಿ’ ನೀರಿನ ದರ ಏರಿಕೆ ಸಾಧ್ಯತೆ |Kaveri Water

ಬೆಂಗಳೂರು : ಬೆಂಗಳೂರಿಗರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ಕಾವೇರಿ ನೀರಿನ ದರ ಏರಿಕೆಯಾಗುವ ಸುಳಿವು ಸಿಕ್ಕಿದೆ.

ನೀರಿನ ದರ ಏರಿಕೆ ಮಾಡುವಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲು ಜಲಮಂಡಳಿ ಸಿದ್ದತೆ ನಡೆಸಿದೆ. ಕೆಲ ತಿಂಗಳ ಹಿಂದೆಯಷ್ಟೇ ಡಿಸಿಎಂ ಡಿ.ಕೆ.ಶಿವಕುಮಾರ್ ಕಾವೇರಿ ನೀರಿನ ದರ ಪರಿಷ್ಕರಣೆ ಮಾಡುವ ಬಗ್ಗೆ ಸುಳಿವು ನೀಡಿದ್ದರು.

ಮುಂದಿನ ದಿನಗಳಲ್ಲಿ ನೀರಿನ ದರ ಪರಿಷ್ಕರಣೆ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಸಭೆ ಕರೆಯಲಿದ್ದು, ದರ ಪರಿಷ್ಕರಣೆ ಪ್ರಸ್ತಾವನೆಗೆ ಸಂಪೂರ್ಣ ಬೆಂಬಲ ನೀಡುವಂತೆ ಎಲ್ಲ ಜನಪತ್ರಿನಿಧಿಗಳಿಗೆ ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾದ್ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಲಮಂಡಳಿ ನೌಕರರು, ಸಿಬ್ಬಂದಿಗಳ ವೇತನ ಹೆಚ್ಚಳವಾಗಿದೆ. ಜಲಮಂಡಳಿಗೆ ಪ್ರತಿ ತಿಂಗಳು 81 ಕೋಟಿ ಹೊರೆಯಾಗುತ್ತಿದೆ , ಆದ್ದರಿಂದ ನೀರಿನ ದರ ಹೆಚ್ಚಳ ಮಾಡಲು ಸಿದ್ದತೆ ನಡೆಸಲಾಗಿದೆ ಎನ್ನಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read