BREAKING : ಬೆಂಗಳೂರಿನ ಆಸ್ತಿ ಮಾಲೀಕರ ಗಮನಕ್ಕೆ ; ‘OTS’ ಕಾಲಾವಕಾಶ ಆ.31 ರವರೆಗೆ ವಿಸ್ತರಣೆ

ಬೆಂಗಳೂರು : ಬಿಬಿಎಂಪಿ ಘೋಷಿಸಿದ್ದ ಒಂದು ಬಾರಿ ತೀರುವಳಿ (OTS) ಯೋಜನೆಯ ಕಾಲಾವಕಾಶ 1 ತಿಂಗಳು ವಿಸ್ತರಣೆ ಮಾಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

(OTS) ಯೋಜನೆಯ ಇದೇ ತಿಂಗಳು ಜುಲೈ 31ಕ್ಕೆ ಮುಕ್ತಾಯಗೊಳ್ಳಲಿತ್ತು. ಆದರೆ ಇನ್ನೂ ಹಲವಾರು ಮಂದಿ ಆಸ್ತಿ ತೆರಿಗೆ ಪಾವತಿಸಿದ ಹಿನ್ನೆಲೆ OTS) ಯೋಜನೆಯ ಕಾಲಾವಕಾಶ 1 ತಿಂಗಳು ಅಂದರೆ ಆಗಸ್ಟ್ 31 ರವರೆಗೆ ವಿಸ್ತರಣೆ ಮಾಡಲಾಗಿದೆ. ನ್ಯಾನೋ ಸಮ್ಮೇಳನದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆಶಿ ಈ ವಿಚಾರ ತಿಳಿಸಿದ್ದಾರೆ.

ಆಸ್ತಿ ತೆರಿಗೆ ಎಷ್ಟು ಪಾವತಿಸಬೇಕಿದೆ, ಎಲ್ಲಿ ಪಾವತಿಸಬೇಕು ಎಂಬ ಬಗ್ಗೆ ಗೊಂದಲಗಳಿದ್ದಲ್ಲಿ ಸಹಾಯವಾಣಿ 1533 ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಬಿಬಿಎಂಪಿ ಕಾಯ್ದೆಯಲ್ಲಿ ಆಸ್ತಿತೆರಿಗೆ ಬಾಕಿ ವಸೂಲಾತಿಗೆ ಅವಕಾಶವಿದೆ. ಆದಾಗ್ಯೂ, ಒಟಿಎಸ್ ನಾಗರಿಕರಿಗೆ ಸಹಾಯ ಮಾಡಲು ಸರ್ಕಾರ ಮತ್ತು ಬಿಬಿಎಂಪಿಯೂ ಜೊತೆಯಾಗಿ ಕಾರ್ಯನಿರ್ವಹಿಸಲಿದೆ .ನಾಗರಿಕರು https://bbmptax.karnataka.gov.in ಮೂಲಕ ಆನ್ಲೈನ್ ನಲ್ಲಿ ಆಸ್ತಿತೆರಿಗೆಯನ್ನು ಸುಲಭವಾಗಿ ಪಾವತಿಸಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read