BREAKING : CM ‘ಮುಡಾ’ ಹಗರಣದ ತೀರ್ಪು ಪ್ರಕಟ ಹಿನ್ನೆಲೆ ; ಬೆಂಗಳೂರು ಸೇರಿ ರಾಜ್ಯಾದ್ಯಂತ ಕಟ್ಟೆಚ್ಚರ.!

ಬೆಂಗಳೂರು : ‘ಮುಡಾ’ ಹಗರಣದ ಬಗ್ಗೆ ಇಂದು ಹೈಕೋರ್ಟ್ ತೀರ್ಪು ಪ್ರಕಟವಾಗುವ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ಡಿಜಿ & ಐಜಿಪಿ ಅಲೋಕ್ ಮೋಹನ್ ಬೆಂಗಳೂರಿನ ಎಲ್ಲಾ ಕಡೆ ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಹಾಗೂ ಎಲ್ಲಾ ಜಿಲ್ಲೆಗಳ ಎಸ್ ಪಿಗಳಿಗೆ ಡಿಜಿ & ಐಜಿಪಿ ಅಲೋಕ್ ಮೋಹನ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಎಚ್ಚರ ವಹಿಸುವಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಪೊಲೀಸ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಇಂದು ಹೈಕೋರ್ಟ್ ತೀರ್ಪು ಪ್ರಕಟವಾಗಲಿದೆ. ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದರಾಮಯ್ಯ ಭವಿಷ್ಯ ನಿರ್ಧಾರವಾಗಲಿದೆ. ಒಂದು ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದರೆ ಅಭಿಮಾನಿಗಳಿಂದ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ. ಈ ಹಿನ್ನೆಲೆ ಎಚ್ಚರಿಕೆ ವಹಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read