BREAKING: ಕೊಡಗು ಪೊಲೀಸರ ಭರ್ಜರಿ ಬೇಟೆ, 10 ಕೋಟಿ ರೂ. ಮೌಲ್ಯದ ಅಂಬರ್ ಗ್ರೀಸ್ ವಶ

ಮಡಿಕೇರಿ: ಮಹತ್ವದ ಕಾರ್ಯಾಚರಣೆ ನಡೆಸಿರುವ ಕೊಡಗು ಜಿಲ್ಲಾ ಪೊಲೀಸರು ಕೇರಳ ರಾಜ್ಯದಿಂದ ಅಕ್ರಮವಾಗಿ ಕಾರ್ ನಲ್ಲಿ ಸಾಗಿಸುತ್ತಿದ್ದ 10 ಕೋಟಿ ರೂಪಾಯಿ ಮೌಲ್ಯದ 10 ಕೆಜಿ 390 ಗ್ರಾಂ ಅಂಬರ್ ಗ್ರೀಸ್ ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರ್ಯಾಚರಣೆಯ ವೇಳೆ ತಿಮಿಂಗಿಲದ ವಾಂತಿ ಸಾಗಿಸುತ್ತಿದ್ದ 9 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 10 ಕೋಟಿ ರೂಪಾಯಿ ಮೌಲ್ಯದ ಅಂಬರ್ ಗ್ರೀಸ್, ಎರಡು ನೋಟು ಎಣಿಕೆ ಯಂತ್ರಗಳು ಮತ್ತು ಎರಡು ಕಾರ್ ವಶಕ್ಕೆ ಪಡೆಯಲಾಗಿದೆ.

ತಿರುವನಂತಪುರಂನಿಂದ ಅಕ್ರಮವಾಗಿ ತಿಮಿಂಗಿಲದ ವಾಂತಿ ಮಾರಾಟ ಮಾಡುವ ಸಲುವಾಗಿ ವಾಹನದಲ್ಲಿ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಕೇರಳದ ಶಂಸುದ್ದೀನ್, ನವಾಜ್, ಲತೀಶ್, ರಿಜೇಶ್, ಪ್ರಶಾಂತ್ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ರಾಘವೇಂದ್ರ, ಕಾಸರಗೋಡಿನ ಬಾಲಚಂದ್ರ ನಾಯಕ್, ಕಲ್ಲಿಕೋಟೆಯ ಸಂಜು ಥಾಮಸ್, ಕಣ್ಣುರಿನ ಜೊಬಿನ್ ಅವರನ್ನು ಬಂಧಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read