BREAKING : ಯುರೋಪ್ ಪ್ರವಾಸದ ಕನಸು ಕಂಡಿದ್ದ ನಟ ದರ್ಶನ್ ಗೆ ಬಿಗ್ ಶಾಕ್ |Actor Darshan

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಗೆ ಮತ್ತೊಂದು ಶಾಕ್ ಎದುರಾಗಿದೆ. ಹೌದು. ನಟ ದರ್ಶನ್ ಗೆ ಸ್ವಿಟ್ಜರ್ ಲ್ಯಾಂಡ್ ವೀಸಾ ನೀಡಲು ನಿರಾಕರಿಸಿದೆ ಎಂದು ತಿಳಿದು ಬಂದಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬೆಂಗಳೂರಿನ 64 ನೇ ಸಿಸಿಹೆಚ್ ಕೋರ್ಟ್ ನಲ್ಲಿ ನಟ ದರ್ಶನ್ ವಿಚಾರಣೆಗೆ ಹಾಜರಾಗಿದ್ದರು.

ಇದರ ನಡುವೆ ನಟ ದರ್ಶನ್ ಡೆವಿಲ್ ಸಿನಿಮಾದ ಶೂಟಿಂಗ್ ಗಾಗಿ ಯೂರೋಪ್ ಗೆ ತೆರಳುವ ಕನಸು ಕಂಡಿದ್ದರು. ಆದರೆ ಮೂಲಗಳ ಪ್ರಕಾರ ಸ್ವಿಟ್ಜರ್ ಲ್ಯಾಂಡ್ ದರ್ಶನ್ ಗೆ ವೀಸಾ ನಿರಾಕರಿಸಿದೆ ಎಂದು ತಿಳಿದು ಬಂದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಕೋರ್ಟ್ ನಲ್ಲಿರುವ ಹಿನ್ನೆಲೆ, ಕ್ರಿಮಿನಲ್ ಬ್ಯಾಕ್ ಗ್ರೌಂಡ್ ಹಿನ್ನೆಲೆ ವೀಸಾ ನೀಡಲು ಸ್ವಿಟ್ಜರ್ ಲ್ಯಾಂಡ್ ನಿರಾಕರಿಸಿದೆ. ಕ್ರಿಮಿನಲ್ ಹಿನ್ನೆಲೆ ಯೂರೋಪ್ ಗೆ ಪ್ರವೇಶ ನಿಷೇಧಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read