BREAKING: ಅನನ್ಯಾ ಭಟ್ ನಾಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್: ಎಸ್ಐಟಿಯಿಂದ ನೋಟಿಸ್ ಜಾರಿ ಬೆನ್ನಲ್ಲೇ ಸುಜಾತಾ ಭಟ್ ಉಲ್ಟಾ

ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿಯಿಂದ ಸುಜಾತಾ ಭಟ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಅನನ್ಯಾ ಭಟ್ ನಾಪತ್ತೆ ಪ್ರಕರಣದ ವಿವರ ನೀಡುವಂತೆ ಸುಜಾತಾ ಭಟ್ ಅವರಿಗೆ ಎಸ್ಐಟಿಯಿಂದ ನೋಟಿಸ್ ನೀಡಲಾಗಿದೆ. ಕೇಸ್ ವಾಪಸ್ ಪಡೆಯುವುದಾಗಿ ಸುಜಾತಾ ಭಟ್ ಹೇಳಿದ್ದಾರೆ. ಆದರೆ ಕೇಸ್ ಹಿಂಪಡೆಯುವ ಬಗ್ಗೆ ಎಸ್ಐಟಿಗೆ ಸುಜಾತಾ ಭಟ್ ತಿಳಿಸಿಲ್ಲ ಎನ್ನಲಾಗಿದೆ.

ನನ್ನ ಮಗಳು ಅನನ್ಯಾ ಭಟ್ ಧರ್ಮಸ್ಥಳಕ್ಕೆ ಹೋಗಿದ್ದ ವೇಳೆ ನಾಪತ್ತೆಯಾಗಿರುವುದಾಗಿ ಸುಜಾತಾ ಭಟ್ ದೂರು ನೀಡಿದ್ದರು. ತಮ್ಮ ಪುತ್ರಿಯ ಫೋಟೋವನ್ನು ಕೂಡ ತೋರಿಸಿದ್ದರು. ಆದರೆ ಸುಜಾತಾ ಭಟ್ ಮದುವೆಯಾಗಿಲ್ಲ, ಮಕ್ಕಳು ಕೂಡ ಇಲ್ಲವೆಂದು ಅವರ ಸಹೋದರ ಸ್ಪೋಟಕ ಹೇಳಿಕೆ ನೀಡಿದ್ದರು. ಸುಜಾತಾ ತೋರಿಸಿರುವ ಫೋಟೋ ನನ್ನ ತಂಗಿಯ ಫೋಟೋ ಎಂದು ತಿಳಿಸಿದ್ದರು. ಈ ನಡುವೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸುಜಾತಾ ಭಟ್ ವಿರುದ್ಧ ದೂರು ನೀಡಿದ್ದಾರೆ. ಅನನ್ಯ ಭಟ್ ನಾಪತ್ತೆ ಪ್ರಕರಣದ ತನಿಖೆಯನ್ನು ಸರ್ಕಾರ ಎಸ್ಐಟಿಗೆ ವಹಿಸಿದೆ. ಇದರ ಬೆನ್ನಲ್ಲೇ ವಿಚಾರಣೆಗೆ ಹಾಜರಾಗಲು ಸುಜಾತಾ ಭಟ್ ಗೆ ತಿಳಿಸಲಾಗಿದ್ದು, ಅವರು ಕೇಸ್ ವಾಪಸ್ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read